BREAKING NEWS

ಬಜೆಟ್ ಮಂಡನೆ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತ ಅಪರಿಚಿತ ವ್ಯಕ್ತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಬಜೆಟ್ ಮಂಡನೆಯ ವೇಳೆ ಭದ್ರತಾ ಲೋಪ ಎದುರಾದ ಘಟನೆ ನಡೆದಿದೆ.

ಸಿಎಂ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಸೀಟ್‍ನಲ್ಲಿ ಕುಳಿತುಕೊಂಡಿದ್ದರು. ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ಸಂದರ್ಭದಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿರುವ ಆಸನದಲ್ಲಿ ವ್ಯಕ್ತಿ ಸುಮಾರು 15 ನಿಮಿಷಗಳ ಕಾಲ ಕುಳಿತಿದ್ದರು. ಕರೆಮ್ಮ ಬಂದ ಬಳಿಕ ವ್ಯಕ್ತಿ ಎದ್ದು ಹೋಗಿದ್ದಾನೆ.

ಈ ಸಂಬಂಧ ಗುರುಮಿಠಕಲ್ ಶಾಸಕ ಶರಣ ಗೌಡ ಕಂದಕೂರು ಮಾಧ್ಯಮದವರೊಂದಿಗೆ ಮಾತನಾಡಿ, ಯಾರೋ ಒಬ್ಬ ಖಾಸಗಿ ವ್ಯಕ್ತಿ ಬಂದು ಸದನದ ಆಸನದಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ನಾನು ಪಕ್ಕದಲ್ಲಿದ್ದ ಜಿಟಿ ದೇವೇಗೌಡ ಅವರ ಬಳಿ ಕೇಳಿದೆ. ಅವರು ಯಾರೋ ಗೊತ್ತಿಲ್ಲ ಅಂದ್ರು. ಆಗ ನಾನು ಆ ವ್ಯಕ್ತಿಯನ್ನು ಕೇಳಿದಾಗ ಮೊಳಕಾಲ್ಮೂರು ಎಂಎಲ್‍ಎ ಅಂದಿದ್ದಾರೆ. ಅವರು ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತಿದ್ರು. ಇದೊಂದು ಭದ್ರತಾ ಲೋಪ ಎಂದರೆ ತಪ್ಪಾಗಲಾರದು ಎಂದರು.

ಶಾಸಕರಲ್ಲದೇ ಇರುವವರು ಹೀಗೆ ಬಂದು ಕುಳಿತುಕೊಳ್ಳುತ್ತಾರೆ ಎಂದರೆ ನಿಜಕ್ಕೂ ಶಾಕ್ ಆಯಿತು. ಸದನದ ಒಳಗಡೆ ಯಾರನ್ನೂ ಒಳಗಡೆ ಬಿಡಲ್ಲ. ಅಂಥದ್ದರಲ್ಲಿ ಈ ವ್ಯಕ್ತಿ ಒಳಗೆ ಬರುತ್ತಾರೆ ಅಂದರೆ ನಿಜಕ್ಕೂ ಅಚ್ಚರಿಯೇ ಸರಿ. ವ್ಯಕ್ತಿ 15 ನಿಮಿಷ ಕುಳಿತುಕೊಂಡಿದ್ದಲ್ಲದೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿ ತೆರಳಿ ಹ್ಯಾಂಡ್ ಶೇಕ್ ಕೂಡ ಮಾಡಿದ್ದಾರೆ. ಆದರೆ ಡಿಸಿಎಂ ಅವರು ಬಜೆಟ್ ಬ್ಯುಸಿಯಲ್ಲಿ ಇದ್ದ ಕಾರಣ ವ್ಯಕ್ತಿ ಕಡೆ ಹೆಚ್ಚಿನ ಗಮನ ಕೊಡಲಿಲ್ಲ ಎಂದರು.

ಒಟ್ಟಿನಲ್ಲಿ ಈ ರೀತಿಯಾಗಿ ಅಪರಿಚಿತ ವ್ಯಕ್ತಿ ಸದನದ ಒಳಗಡೆ ಬಂದಿದ್ದು, ಸದನ ಹಾಗೂ ಶಾಸಕರಿಗೂ ಅಗೌರವ ತೋರಿದಂತಾಗಿದೆ. ಅಲ್ಲದೆ ಹೀಗೆ ಒಳಗಡೆ ಬಂದು ಯಾರಿಗಾದರೂ ಏನಾದರೂ ಅನಾಹುತ ಆದರೆ ಯರು ಜವಾಬ್ದಾರಿ ಎಂದು ಶಾಸಕರು ಪ್ರಶ್ನಿಸಿದರು.

ಸದ್ಯ ಈ ಸಂಬಂಧ ಸ್ಪೀಕರ್ ಗೆ ಶರಣ ಗೌಡ ಕಂದಕೂರು ದೂರು ನೀಡಿದ್ದು, ವ್ಯಕ್ತಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

lokesh

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago