BREAKING NEWS

ಆಂಧ್ರ ಪ್ರದೇಶ ರೈಲು ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು  ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ.

ಅಪಘಾತದಲ್ಲಿ 3 ಬೋಗಿಗಳು ಜಖಂಗೊಂಡಿವೆ ಎಂದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳೀಯ ಆಡಳಿತ, ಎನ್‌ಡಿಆರ್‌ಎಫ್ ಹಳಿ ತಪ್ಪಿರುವ ಬೋಗಿಗಳ ತೆರವು ಕಾರ್ಯಾಚರಣೆಯಲ್ಲಿ ನಿರತವಾಗಿವೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ. ಮಾನವ ದೋಷದಿಂದಾಗಿ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳು ಡಿಕ್ಕಿಯಾಗಿರಬಹುದು ಎಂದು  ಈಸ್ಟ್ ಕೋಸ್ಟ್ ರೈಲ್ವೇ ಹೇಳಿದೆ.

ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 10 ಲಕ್ಷ ರೂಪಾಯಿ ಹಾಗೂ  ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಅವರ ಕಚೇರಿ ತಿಳಿಸಿದೆ. ಬೇರೆ ರಾಜ್ಯಗಳ ಜನರು ಸಾವನ್ನಪ್ಪಿದರೆ, ದುಃಖಿತ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ  ರೂ. 50,000 ಪರಿಹಾರವನ್ನು ನೀಡಲಾಗುತ್ತದೆ ಎಂದು ಸಿಎಂಒ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ವಿಜಯನಗರದ ಹತ್ತಿರದ ಜಿಲ್ಲೆಗಳಾದ ವಿಶಾಖಪಟ್ಟಣಂ ಮತ್ತು ಅನಕಾಪಲ್ಲಿಯಿಂದ ಸಾಧ್ಯವಾದಷ್ಟು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲು ಮತ್ತು ಉತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಹತ್ತಿರದ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲು ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆದೇಶಿಸಿದ್ದಾರೆ.

https://x.com/ANI/status/1718828513913139432?s=20
ಪ್ರಧಾನಮಂತ್ರಿ ಕೂಡಾ ಪರಿಹಾರ ಘೋಷಿಸಿದ್ದು, ಪ್ರಧಾನಮಂತ್ರಿ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ರೂ. 2 ಲಕ್ಷ ಹಾಗೂ ಗಾಯಾಳುಗಳಿಗೆ ರೂ. 50, 000 ನೀಡುವುದಾಗಿ ಘೋಷಿಸಿದ್ದಾರೆ. ರೈಲ್ವೆಯು ವಿವಿಧ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಿದೆ.

https://x.com/PMOIndia/status/1718678686352961833?s=20

andolanait

Recent Posts

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

57 mins ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

58 mins ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

1 hour ago

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

2 hours ago

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

4 hours ago