ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ.
ಅಪಘಾತದಲ್ಲಿ 3 ಬೋಗಿಗಳು ಜಖಂಗೊಂಡಿವೆ ಎಂದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳೀಯ ಆಡಳಿತ, ಎನ್ಡಿಆರ್ಎಫ್ ಹಳಿ ತಪ್ಪಿರುವ ಬೋಗಿಗಳ ತೆರವು ಕಾರ್ಯಾಚರಣೆಯಲ್ಲಿ ನಿರತವಾಗಿವೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ. ಮಾನವ ದೋಷದಿಂದಾಗಿ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳು ಡಿಕ್ಕಿಯಾಗಿರಬಹುದು ಎಂದು ಈಸ್ಟ್ ಕೋಸ್ಟ್ ರೈಲ್ವೇ ಹೇಳಿದೆ.
ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 10 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಅವರ ಕಚೇರಿ ತಿಳಿಸಿದೆ. ಬೇರೆ ರಾಜ್ಯಗಳ ಜನರು ಸಾವನ್ನಪ್ಪಿದರೆ, ದುಃಖಿತ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 50,000 ಪರಿಹಾರವನ್ನು ನೀಡಲಾಗುತ್ತದೆ ಎಂದು ಸಿಎಂಒ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ವಿಜಯನಗರದ ಹತ್ತಿರದ ಜಿಲ್ಲೆಗಳಾದ ವಿಶಾಖಪಟ್ಟಣಂ ಮತ್ತು ಅನಕಾಪಲ್ಲಿಯಿಂದ ಸಾಧ್ಯವಾದಷ್ಟು ಆಂಬ್ಯುಲೆನ್ಸ್ಗಳನ್ನು ಕಳುಹಿಸಲು ಮತ್ತು ಉತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಹತ್ತಿರದ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲು ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆದೇಶಿಸಿದ್ದಾರೆ.
https://x.com/ANI/status/1718828513913139432?s=20
ಪ್ರಧಾನಮಂತ್ರಿ ಕೂಡಾ ಪರಿಹಾರ ಘೋಷಿಸಿದ್ದು, ಪ್ರಧಾನಮಂತ್ರಿ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ರೂ. 2 ಲಕ್ಷ ಹಾಗೂ ಗಾಯಾಳುಗಳಿಗೆ ರೂ. 50, 000 ನೀಡುವುದಾಗಿ ಘೋಷಿಸಿದ್ದಾರೆ. ರೈಲ್ವೆಯು ವಿವಿಧ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…