BREAKING NEWS

ಆಂಧ್ರ ಪ್ರದೇಶ ರೈಲು ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು  ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ.

ಅಪಘಾತದಲ್ಲಿ 3 ಬೋಗಿಗಳು ಜಖಂಗೊಂಡಿವೆ ಎಂದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳೀಯ ಆಡಳಿತ, ಎನ್‌ಡಿಆರ್‌ಎಫ್ ಹಳಿ ತಪ್ಪಿರುವ ಬೋಗಿಗಳ ತೆರವು ಕಾರ್ಯಾಚರಣೆಯಲ್ಲಿ ನಿರತವಾಗಿವೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ. ಮಾನವ ದೋಷದಿಂದಾಗಿ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳು ಡಿಕ್ಕಿಯಾಗಿರಬಹುದು ಎಂದು  ಈಸ್ಟ್ ಕೋಸ್ಟ್ ರೈಲ್ವೇ ಹೇಳಿದೆ.

ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 10 ಲಕ್ಷ ರೂಪಾಯಿ ಹಾಗೂ  ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಅವರ ಕಚೇರಿ ತಿಳಿಸಿದೆ. ಬೇರೆ ರಾಜ್ಯಗಳ ಜನರು ಸಾವನ್ನಪ್ಪಿದರೆ, ದುಃಖಿತ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ  ರೂ. 50,000 ಪರಿಹಾರವನ್ನು ನೀಡಲಾಗುತ್ತದೆ ಎಂದು ಸಿಎಂಒ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ವಿಜಯನಗರದ ಹತ್ತಿರದ ಜಿಲ್ಲೆಗಳಾದ ವಿಶಾಖಪಟ್ಟಣಂ ಮತ್ತು ಅನಕಾಪಲ್ಲಿಯಿಂದ ಸಾಧ್ಯವಾದಷ್ಟು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲು ಮತ್ತು ಉತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಹತ್ತಿರದ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲು ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆದೇಶಿಸಿದ್ದಾರೆ.

https://x.com/ANI/status/1718828513913139432?s=20
ಪ್ರಧಾನಮಂತ್ರಿ ಕೂಡಾ ಪರಿಹಾರ ಘೋಷಿಸಿದ್ದು, ಪ್ರಧಾನಮಂತ್ರಿ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ರೂ. 2 ಲಕ್ಷ ಹಾಗೂ ಗಾಯಾಳುಗಳಿಗೆ ರೂ. 50, 000 ನೀಡುವುದಾಗಿ ಘೋಷಿಸಿದ್ದಾರೆ. ರೈಲ್ವೆಯು ವಿವಿಧ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಿದೆ.

https://x.com/PMOIndia/status/1718678686352961833?s=20

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

10 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago