BREAKING NEWS

ಇಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ ಪತ್ನಿ ಟೀನಾ

ಮುಂಬೈ : ಉದ್ಯಮಿ ಮುಕೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿಯವರ ಪತ್ನಿ ಟೀನಾ ಅವರು ಜುಲೈ 4ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ.

ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿಯಲ್ಲಿ ದಾಖಲಾಗಿರುವ ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಹಾಜರಾಗಿದ್ದಾರೆ.

ಅನಿಲ್ ಅಂಬಾನಿ ಅವರನ್ನು ತನಿಖಾ ಸಂಸ್ಥೆ ಪ್ರಶ್ನಿಸಿದ ಒಂದು ದಿನದ ನಂತರ ಟೀನಾ ಅಂಬಾನಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇದು ಅಂಬಾನಿ ಕಂಪನಿಗಳಲ್ಲಿನ ಹೂಡಿಕೆಗೆ ಸಂಬಂಧಿಸಿದ ಹೊಸ ಪ್ರಕರಣ ಎಂದು ಮೂಲಗಳು ತಿಳಿಸಿವೆ.

64 ವರ್ಷದ ಅನಿಲ್ ಅಂಬಾನಿ ಅವರು ಈ ಹಿಂದೆ 2020 ರಲ್ಲಿ ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದರು.

ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿ 814 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ಹಣದ ಮೇಲಿನ 420 ಕೋಟಿ ರೂ. ತೆರಿಗೆ ವಂಚನೆ ಆರೋಪದ ಮೇಲೆ ಕಳೆದ ವರ್ಷ ಆಗಸ್ಟ್ ನಲ್ಲಿ ಆದಾಯ ತೆರಿಗೆ ಇಲಾಖೆ ಅನಿಲ್ ಅಂಬಾನಿ ಅವರಿಗೆ ಕಪ್ಪುಹಣ ತಡೆ ಕಾಯ್ದೆಯಡಿ ನೋಟಿಸ್ ಜಾರಿ ಮಾಡಿತ್ತು.

ಇದೀಗ ಫಾರೀನ್ ಎಕ್ಸ್​ಚೇಂಜ್ ನಿಯಮಗಳ ಉಲ್ಲಂಘನೆಯ ಆರೋಪಗಳಿರುವ ಹೊಸ ಪ್ರಕರಣವೊಂದು ದಾಖಲಾಗಿದ್ದು, ಆ ಸಂಬಂಧ ಅನಿಲ್ ಅಂಬಾನಿ ಮತ್ತು ಈಗ ಟೀನಾ ಅಂಬಾನಿ ವಿಚಾರಣೆ ನಡೆಯುತ್ತಿದೆ.

lokesh

Recent Posts

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

25 mins ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

1 hour ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

3 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

3 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

4 hours ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

4 hours ago