BREAKING NEWS

ಇಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ ಪತ್ನಿ ಟೀನಾ

ಮುಂಬೈ : ಉದ್ಯಮಿ ಮುಕೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿಯವರ ಪತ್ನಿ ಟೀನಾ ಅವರು ಜುಲೈ 4ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ.

ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿಯಲ್ಲಿ ದಾಖಲಾಗಿರುವ ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಹಾಜರಾಗಿದ್ದಾರೆ.

ಅನಿಲ್ ಅಂಬಾನಿ ಅವರನ್ನು ತನಿಖಾ ಸಂಸ್ಥೆ ಪ್ರಶ್ನಿಸಿದ ಒಂದು ದಿನದ ನಂತರ ಟೀನಾ ಅಂಬಾನಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇದು ಅಂಬಾನಿ ಕಂಪನಿಗಳಲ್ಲಿನ ಹೂಡಿಕೆಗೆ ಸಂಬಂಧಿಸಿದ ಹೊಸ ಪ್ರಕರಣ ಎಂದು ಮೂಲಗಳು ತಿಳಿಸಿವೆ.

64 ವರ್ಷದ ಅನಿಲ್ ಅಂಬಾನಿ ಅವರು ಈ ಹಿಂದೆ 2020 ರಲ್ಲಿ ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದರು.

ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿ 814 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ಹಣದ ಮೇಲಿನ 420 ಕೋಟಿ ರೂ. ತೆರಿಗೆ ವಂಚನೆ ಆರೋಪದ ಮೇಲೆ ಕಳೆದ ವರ್ಷ ಆಗಸ್ಟ್ ನಲ್ಲಿ ಆದಾಯ ತೆರಿಗೆ ಇಲಾಖೆ ಅನಿಲ್ ಅಂಬಾನಿ ಅವರಿಗೆ ಕಪ್ಪುಹಣ ತಡೆ ಕಾಯ್ದೆಯಡಿ ನೋಟಿಸ್ ಜಾರಿ ಮಾಡಿತ್ತು.

ಇದೀಗ ಫಾರೀನ್ ಎಕ್ಸ್​ಚೇಂಜ್ ನಿಯಮಗಳ ಉಲ್ಲಂಘನೆಯ ಆರೋಪಗಳಿರುವ ಹೊಸ ಪ್ರಕರಣವೊಂದು ದಾಖಲಾಗಿದ್ದು, ಆ ಸಂಬಂಧ ಅನಿಲ್ ಅಂಬಾನಿ ಮತ್ತು ಈಗ ಟೀನಾ ಅಂಬಾನಿ ವಿಚಾರಣೆ ನಡೆಯುತ್ತಿದೆ.

lokesh

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago