ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತುರದಿಂದ ನಿರೀಕ್ಷಿಸುತ್ತಿರುವ ಅನ್ನಭಾಗ್ಯ ಯೋಜನೆಯು ಈ ಮೊದಲು ಪ್ರಕಟಿಸಿದ್ದಂತೆ ಜು. 1ರ ಬದಲಿಗೆ ಆ. 1ರಿಂದ ಆರಂಭವಾಗಲಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರವು ಹಿಂದೆ ಅನ್ನಭಾಗ್ಯ ಯೋಜನೆಯು ಜು. 1ರಿಂದ ಜಾರಿಗೊಳಿಸುವುದಾಗಿ ಹೇಳಿತ್ತು. ಆದರೆ, ಕೇಂದ್ರದಿಂದ ಆಹಾರ ಭದ್ರತೆ ಕಾಯ್ದೆಯಡಿ ಸರಬರಾಜು ಆಗುತ್ತಿದ್ದ ಅಕ್ಕಿಯನ್ನು ನಿಲ್ಲಿಸಿದ ಕಾರಣ, ಅನ್ಯ ರಾಜ್ಯಗಳಿಂದ ಅಕ್ಕಿ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. ಈಗಾಗಲೇ ಛತ್ತೀಸ್ ಗಢ ಹಾಗೂ ಪಂಜಾಬ್ ರಾಜ್ಯಗಳು ಅಕ್ಕಿ ಕೊಡುವುದಾಗಿ ಒಪ್ಪಿವೆ. ಛತ್ತೀಸ್ ಗಢದಿಂದ 1.4 ಮೆಟ್ರಿಕ್ ಟನ್ ಅಕ್ಕಿ ತರಿಸಿಕೊಳ್ಳುವ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ಸಚಿವರು ತಿಳಿಸಿದರು.
ಅನ್ನಭಾಗ್ಯ ಯೋಜನೆಗೆ ಮೂರು ತೊಡಕುಗಳು ಇದ್ದು ಸದ್ಯಕ್ಕೆ ಅವು ನಿವಾರಣೆಯಾಗದ ಕಾರಣ ಯೋಜನೆಯ ಜಾರಿಯಲ್ಲಿ ವಿಳಂಬವಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಅವುಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ.
ಅಗತ್ಯ ಅಕ್ಕಿಯನ್ನು ಅಲ್ಲಿಂದ ಅಕ್ಕಿಯನ್ನು ಸರಬರಾಜು ಮಾಡಿಕೊಂಡು ಜನರಿಗೆ ಕೊಡುತ್ತೇವೆ. ಛತ್ತೀಸ್ಗಡದವರು 1.5 ಲಕ್ಷ ಟನ್ ಅಕ್ಕಿ ಕೊಡ್ತೇವೆ ಅಂದಿದ್ದಾರೆ. ತೆಲಂಗಾಣದವ್ರು ಗೋಧಿ ಕೊಡುತ್ತೇವೆ ಸಚಿವ ಮುನಿಯಪ್ಪ ಹೇಳಿದ್ದಾರೆ. ಪಂಜಾಬ್ ರಾಜ್ಯದವರು ಕೂಡಾ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ, ಈ ರಾಜ್ಯಗಳಿಂದ ನಮಗೆ ಸಾಗಾಟಕ್ಕೆ ಸಾರಿಗೆ ವೆಚ್ಚ ಜಾಸ್ತಿ ಆಗಲಿದೆ. ಕೇಂದ್ರದ ಸಂಸ್ಥೆಗಳಾದರೆ ಅವರೇ ತರಿಸಿಕೊಂಡು ನಮಗೆ ಡೆಲಿವರಿ ಕೊಡುತ್ತಾರೆ ಎಂದರು. ಈ ವಾರದಲ್ಲೇ ರೇಟ್ ಫಿಕ್ಸ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯೆಲ್ ಅವರು ನವದೆಹಲಿಯಲ್ಲಿ ಜೂ. 21ರಂದು ಸುದ್ದಿಗೋಷ್ಠಿ ನಡೆಸಿ, “ನಾವು ಕರ್ನಾಟಕ ಮಾತ್ರವಲ್ಲ ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು ಸೇರಿ ಹಲವಾರು ರಾಜ್ಯಗಳಿಂದ ಬಂದಿರುವ ಅಕ್ಕಿ ಪೂರೈಕೆ ಬೇಡಿಕೆಯನ್ನ ನಿರಾಕರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಆದರೆ, ಈ ಮಾತನ್ನು ರಾಜ್ಯ ಕಾಂಗ್ರೆಸ್ ನಾಯಕರು ಒಪ್ಪುತ್ತಿಲ್ಲ. ನೀವು ಈಗಾಗಲೇ ಕೊಡುತ್ತಿದ್ದ ಅಕ್ಕಿಯನ್ನೇ ಮುಂದುವರಿಸಿ. ಅದನ್ನು ನಿಲ್ಲಿಸಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…