ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತುರದಿಂದ ನಿರೀಕ್ಷಿಸುತ್ತಿರುವ ಅನ್ನಭಾಗ್ಯ ಯೋಜನೆಯು ಈ ಮೊದಲು ಪ್ರಕಟಿಸಿದ್ದಂತೆ ಜು. 1ರ ಬದಲಿಗೆ ಆ. 1ರಿಂದ ಆರಂಭವಾಗಲಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರವು ಹಿಂದೆ ಅನ್ನಭಾಗ್ಯ ಯೋಜನೆಯು ಜು. 1ರಿಂದ ಜಾರಿಗೊಳಿಸುವುದಾಗಿ ಹೇಳಿತ್ತು. ಆದರೆ, ಕೇಂದ್ರದಿಂದ ಆಹಾರ ಭದ್ರತೆ ಕಾಯ್ದೆಯಡಿ ಸರಬರಾಜು ಆಗುತ್ತಿದ್ದ ಅಕ್ಕಿಯನ್ನು ನಿಲ್ಲಿಸಿದ ಕಾರಣ, ಅನ್ಯ ರಾಜ್ಯಗಳಿಂದ ಅಕ್ಕಿ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. ಈಗಾಗಲೇ ಛತ್ತೀಸ್ ಗಢ ಹಾಗೂ ಪಂಜಾಬ್ ರಾಜ್ಯಗಳು ಅಕ್ಕಿ ಕೊಡುವುದಾಗಿ ಒಪ್ಪಿವೆ. ಛತ್ತೀಸ್ ಗಢದಿಂದ 1.4 ಮೆಟ್ರಿಕ್ ಟನ್ ಅಕ್ಕಿ ತರಿಸಿಕೊಳ್ಳುವ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ಸಚಿವರು ತಿಳಿಸಿದರು.
ಅನ್ನಭಾಗ್ಯ ಯೋಜನೆಗೆ ಮೂರು ತೊಡಕುಗಳು ಇದ್ದು ಸದ್ಯಕ್ಕೆ ಅವು ನಿವಾರಣೆಯಾಗದ ಕಾರಣ ಯೋಜನೆಯ ಜಾರಿಯಲ್ಲಿ ವಿಳಂಬವಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಅವುಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ.
ಅಗತ್ಯ ಅಕ್ಕಿಯನ್ನು ಅಲ್ಲಿಂದ ಅಕ್ಕಿಯನ್ನು ಸರಬರಾಜು ಮಾಡಿಕೊಂಡು ಜನರಿಗೆ ಕೊಡುತ್ತೇವೆ. ಛತ್ತೀಸ್ಗಡದವರು 1.5 ಲಕ್ಷ ಟನ್ ಅಕ್ಕಿ ಕೊಡ್ತೇವೆ ಅಂದಿದ್ದಾರೆ. ತೆಲಂಗಾಣದವ್ರು ಗೋಧಿ ಕೊಡುತ್ತೇವೆ ಸಚಿವ ಮುನಿಯಪ್ಪ ಹೇಳಿದ್ದಾರೆ. ಪಂಜಾಬ್ ರಾಜ್ಯದವರು ಕೂಡಾ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ, ಈ ರಾಜ್ಯಗಳಿಂದ ನಮಗೆ ಸಾಗಾಟಕ್ಕೆ ಸಾರಿಗೆ ವೆಚ್ಚ ಜಾಸ್ತಿ ಆಗಲಿದೆ. ಕೇಂದ್ರದ ಸಂಸ್ಥೆಗಳಾದರೆ ಅವರೇ ತರಿಸಿಕೊಂಡು ನಮಗೆ ಡೆಲಿವರಿ ಕೊಡುತ್ತಾರೆ ಎಂದರು. ಈ ವಾರದಲ್ಲೇ ರೇಟ್ ಫಿಕ್ಸ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯೆಲ್ ಅವರು ನವದೆಹಲಿಯಲ್ಲಿ ಜೂ. 21ರಂದು ಸುದ್ದಿಗೋಷ್ಠಿ ನಡೆಸಿ, “ನಾವು ಕರ್ನಾಟಕ ಮಾತ್ರವಲ್ಲ ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು ಸೇರಿ ಹಲವಾರು ರಾಜ್ಯಗಳಿಂದ ಬಂದಿರುವ ಅಕ್ಕಿ ಪೂರೈಕೆ ಬೇಡಿಕೆಯನ್ನ ನಿರಾಕರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಆದರೆ, ಈ ಮಾತನ್ನು ರಾಜ್ಯ ಕಾಂಗ್ರೆಸ್ ನಾಯಕರು ಒಪ್ಪುತ್ತಿಲ್ಲ. ನೀವು ಈಗಾಗಲೇ ಕೊಡುತ್ತಿದ್ದ ಅಕ್ಕಿಯನ್ನೇ ಮುಂದುವರಿಸಿ. ಅದನ್ನು ನಿಲ್ಲಿಸಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…