ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತುರದಿಂದ ನಿರೀಕ್ಷಿಸುತ್ತಿರುವ ಅನ್ನಭಾಗ್ಯ ಯೋಜನೆಯು ಈ ಮೊದಲು ಪ್ರಕಟಿಸಿದ್ದಂತೆ ಜು. 1ರ ಬದಲಿಗೆ ಆ. 1ರಿಂದ ಆರಂಭವಾಗಲಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರವು ಹಿಂದೆ ಅನ್ನಭಾಗ್ಯ ಯೋಜನೆಯು ಜು. 1ರಿಂದ ಜಾರಿಗೊಳಿಸುವುದಾಗಿ ಹೇಳಿತ್ತು. ಆದರೆ, ಕೇಂದ್ರದಿಂದ ಆಹಾರ ಭದ್ರತೆ ಕಾಯ್ದೆಯಡಿ ಸರಬರಾಜು ಆಗುತ್ತಿದ್ದ ಅಕ್ಕಿಯನ್ನು ನಿಲ್ಲಿಸಿದ ಕಾರಣ, ಅನ್ಯ ರಾಜ್ಯಗಳಿಂದ ಅಕ್ಕಿ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. ಈಗಾಗಲೇ ಛತ್ತೀಸ್ ಗಢ ಹಾಗೂ ಪಂಜಾಬ್ ರಾಜ್ಯಗಳು ಅಕ್ಕಿ ಕೊಡುವುದಾಗಿ ಒಪ್ಪಿವೆ. ಛತ್ತೀಸ್ ಗಢದಿಂದ 1.4 ಮೆಟ್ರಿಕ್ ಟನ್ ಅಕ್ಕಿ ತರಿಸಿಕೊಳ್ಳುವ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ಸಚಿವರು ತಿಳಿಸಿದರು.
ಅನ್ನಭಾಗ್ಯ ಯೋಜನೆಗೆ ಮೂರು ತೊಡಕುಗಳು ಇದ್ದು ಸದ್ಯಕ್ಕೆ ಅವು ನಿವಾರಣೆಯಾಗದ ಕಾರಣ ಯೋಜನೆಯ ಜಾರಿಯಲ್ಲಿ ವಿಳಂಬವಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಅವುಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ.
ಅಗತ್ಯ ಅಕ್ಕಿಯನ್ನು ಅಲ್ಲಿಂದ ಅಕ್ಕಿಯನ್ನು ಸರಬರಾಜು ಮಾಡಿಕೊಂಡು ಜನರಿಗೆ ಕೊಡುತ್ತೇವೆ. ಛತ್ತೀಸ್ಗಡದವರು 1.5 ಲಕ್ಷ ಟನ್ ಅಕ್ಕಿ ಕೊಡ್ತೇವೆ ಅಂದಿದ್ದಾರೆ. ತೆಲಂಗಾಣದವ್ರು ಗೋಧಿ ಕೊಡುತ್ತೇವೆ ಸಚಿವ ಮುನಿಯಪ್ಪ ಹೇಳಿದ್ದಾರೆ. ಪಂಜಾಬ್ ರಾಜ್ಯದವರು ಕೂಡಾ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ, ಈ ರಾಜ್ಯಗಳಿಂದ ನಮಗೆ ಸಾಗಾಟಕ್ಕೆ ಸಾರಿಗೆ ವೆಚ್ಚ ಜಾಸ್ತಿ ಆಗಲಿದೆ. ಕೇಂದ್ರದ ಸಂಸ್ಥೆಗಳಾದರೆ ಅವರೇ ತರಿಸಿಕೊಂಡು ನಮಗೆ ಡೆಲಿವರಿ ಕೊಡುತ್ತಾರೆ ಎಂದರು. ಈ ವಾರದಲ್ಲೇ ರೇಟ್ ಫಿಕ್ಸ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯೆಲ್ ಅವರು ನವದೆಹಲಿಯಲ್ಲಿ ಜೂ. 21ರಂದು ಸುದ್ದಿಗೋಷ್ಠಿ ನಡೆಸಿ, “ನಾವು ಕರ್ನಾಟಕ ಮಾತ್ರವಲ್ಲ ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು ಸೇರಿ ಹಲವಾರು ರಾಜ್ಯಗಳಿಂದ ಬಂದಿರುವ ಅಕ್ಕಿ ಪೂರೈಕೆ ಬೇಡಿಕೆಯನ್ನ ನಿರಾಕರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಆದರೆ, ಈ ಮಾತನ್ನು ರಾಜ್ಯ ಕಾಂಗ್ರೆಸ್ ನಾಯಕರು ಒಪ್ಪುತ್ತಿಲ್ಲ. ನೀವು ಈಗಾಗಲೇ ಕೊಡುತ್ತಿದ್ದ ಅಕ್ಕಿಯನ್ನೇ ಮುಂದುವರಿಸಿ. ಅದನ್ನು ನಿಲ್ಲಿಸಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…