ಬೆಂಗಳೂರು: ಅನ್ನಭಾಗ್ಯ, ಶಕ್ತಿ ಯೋಜನೆಗಳು ಬಡಜನರಿಗೆ ಸಾಕಷ್ಟು ನೆರವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.
ವಿಧಾನಮಂಡಲದ ಜಂಟಿ ಅವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು ಶಕ್ತಿ ಯೋಜನೆಗಳಿಂದ ರಾಜ್ಯದ ಪುರಾಣ ಪುಣ್ಯಕ್ಷೇತ್ರಗಳು, ದೇವಸ್ಥಾನಗಳು ತುಂಬಿ ತುಳುಕುತ್ತಿವೆ. ಅನ್ನಭಾಗ್ಯ ಯೋಜನೆ ಅತ್ಯಂತ ಮಹತ್ವದ್ದು. ಸಿದ್ದರಾಮಯ್ಯ ಅವರು ತಮ್ಮ ಅನುಭವದಿಂದ ಯೋಜನೆ ಜಾರಿಗೊಳಿಸಿದ್ದಾರೆ. ತಮಗೂ ಕೂಡ ಬಾಲ್ಯದಲ್ಲಿ ಅನ್ನದ ಮಹತ್ವ ಅರಿತುಕೊಳ್ಳುವಂತಹ ಅನುಭವಗಳಾಗಿವೆ ಎಂದರು.
ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದೆ ಇರುವುದು ಖಂಡನೀಯ. ಬಿಜೆಪಿಯವರು ಪಂಚ ಖಾತ್ರಿ ಯೋಜನೆಗಳನ್ನು ತಕ್ಷಣದಿಂದಲೇ ಜಾರಿಗೊಳಿಸಿ ಒತ್ತಾಯಿಸಿ ಪ್ರತಿಭಟನೆ ನಡೆಸುವ ನೈತಿಕ ಹಕ್ಕು ಹೊಂದಿಲ್ಲ. ಸರ್ಕಾರ ಹಣಕಾಸು ಸಂಪನ್ಮೂಲಗಳನ್ನು ಹೊಂದಿಸಿಕೊಂಡು ಜಾರಿ ಮಾಡಲಿ ಎಂದು ಸಲಹೆ ನೀಡಿದರು.
ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುವ ಜೊತೆಗೆ ಹಗಲು ವೇಳೆಗೆ ವಿದ್ಯುತ್ ನೀಡಬೇಕೆಂದು ಜಿ.ಟಿ.ದೇವೇಗೌಡ ಸಲಹೆ ನೀಡಿದರು.
ಹಿಂದೆ ಕಾಂಗ್ರೆಸ್ ಪಕ್ಷದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮಾಡಿತ್ತು. ಈಗ ಆ ಪಕ್ಷವೇ ಅಧಿಕಾರಕ್ಕೆ ಬಂದಿರುವುದರಿಂದ ದರವನ್ನು ಕಡಿಮೆ ಮಾಡುವುದು ಅವರ ಕರ್ತವ್ಯ ಎಂದು ಹೇಳಿದರು.
ವಚನ ಸಾಹಿತ್ಯ ಕಾಲದ ಸಿದ್ದಾಂತಗಳನ್ನು ಸ್ಮರಿಸಿಕೊಂಡ ಜಿ.ಟಿ.ದೇವೇಗೌಡ ಅವರು, ದುಡಿದು ತಿನ್ನುವುದು ಸೂಕ್ತ ಎಂದು ಶರಣರು ಹೇಳಿದ್ದಾರೆ. ಸರ್ಕಾರದ ಉಚಿತ ಖಾತ್ರಿಗಳು ಶ್ರಮಿಕರನ್ನು ದುಡಿಮೆಯಿಂದ ವಿಮುಖರನ್ನಾಗಿ ಮಾಡುತ್ತದೆ ಎಂದು ಆರ್ಥಿಕ ತಜ್ಞರ ಅಭಿಪ್ರಾಯ ಎಂದರು.
ರಾಜಕೀಯ ಪಕ್ಷಗಳು ಸೃಜನಶೀಲ ಕಾಯಕ ಮತ್ತು ಉತ್ಪಾದನೆಗೆ ಬೆಂಬಲ ನೀಡಬೇಕೆಂದು ಅವರು ಸಲಹೆ ಕೊಟ್ಟರು.
2013 ಮತ್ತು ಈಗಿನ ರಾಜ್ಯಪಾಲರ ಭಾಷಣಗಳು ಯಥಾವತ್ತು ನಕಲಾಗಿವೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಆದ್ಯತೆ ನೀಡುವುದಾಗಿ ಉಲ್ಲೇಖಿಸಿರುವುದು ನಂಬಲರ್ಹವಲ್ಲ ಎಂದರು.
ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮತ್ತು ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…