ಬೆಂಗಳೂರು: ಅನ್ನಭಾಗ್ಯ, ಶಕ್ತಿ ಯೋಜನೆಗಳು ಬಡಜನರಿಗೆ ಸಾಕಷ್ಟು ನೆರವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.
ವಿಧಾನಮಂಡಲದ ಜಂಟಿ ಅವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು ಶಕ್ತಿ ಯೋಜನೆಗಳಿಂದ ರಾಜ್ಯದ ಪುರಾಣ ಪುಣ್ಯಕ್ಷೇತ್ರಗಳು, ದೇವಸ್ಥಾನಗಳು ತುಂಬಿ ತುಳುಕುತ್ತಿವೆ. ಅನ್ನಭಾಗ್ಯ ಯೋಜನೆ ಅತ್ಯಂತ ಮಹತ್ವದ್ದು. ಸಿದ್ದರಾಮಯ್ಯ ಅವರು ತಮ್ಮ ಅನುಭವದಿಂದ ಯೋಜನೆ ಜಾರಿಗೊಳಿಸಿದ್ದಾರೆ. ತಮಗೂ ಕೂಡ ಬಾಲ್ಯದಲ್ಲಿ ಅನ್ನದ ಮಹತ್ವ ಅರಿತುಕೊಳ್ಳುವಂತಹ ಅನುಭವಗಳಾಗಿವೆ ಎಂದರು.
ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದೆ ಇರುವುದು ಖಂಡನೀಯ. ಬಿಜೆಪಿಯವರು ಪಂಚ ಖಾತ್ರಿ ಯೋಜನೆಗಳನ್ನು ತಕ್ಷಣದಿಂದಲೇ ಜಾರಿಗೊಳಿಸಿ ಒತ್ತಾಯಿಸಿ ಪ್ರತಿಭಟನೆ ನಡೆಸುವ ನೈತಿಕ ಹಕ್ಕು ಹೊಂದಿಲ್ಲ. ಸರ್ಕಾರ ಹಣಕಾಸು ಸಂಪನ್ಮೂಲಗಳನ್ನು ಹೊಂದಿಸಿಕೊಂಡು ಜಾರಿ ಮಾಡಲಿ ಎಂದು ಸಲಹೆ ನೀಡಿದರು.
ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುವ ಜೊತೆಗೆ ಹಗಲು ವೇಳೆಗೆ ವಿದ್ಯುತ್ ನೀಡಬೇಕೆಂದು ಜಿ.ಟಿ.ದೇವೇಗೌಡ ಸಲಹೆ ನೀಡಿದರು.
ಹಿಂದೆ ಕಾಂಗ್ರೆಸ್ ಪಕ್ಷದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮಾಡಿತ್ತು. ಈಗ ಆ ಪಕ್ಷವೇ ಅಧಿಕಾರಕ್ಕೆ ಬಂದಿರುವುದರಿಂದ ದರವನ್ನು ಕಡಿಮೆ ಮಾಡುವುದು ಅವರ ಕರ್ತವ್ಯ ಎಂದು ಹೇಳಿದರು.
ವಚನ ಸಾಹಿತ್ಯ ಕಾಲದ ಸಿದ್ದಾಂತಗಳನ್ನು ಸ್ಮರಿಸಿಕೊಂಡ ಜಿ.ಟಿ.ದೇವೇಗೌಡ ಅವರು, ದುಡಿದು ತಿನ್ನುವುದು ಸೂಕ್ತ ಎಂದು ಶರಣರು ಹೇಳಿದ್ದಾರೆ. ಸರ್ಕಾರದ ಉಚಿತ ಖಾತ್ರಿಗಳು ಶ್ರಮಿಕರನ್ನು ದುಡಿಮೆಯಿಂದ ವಿಮುಖರನ್ನಾಗಿ ಮಾಡುತ್ತದೆ ಎಂದು ಆರ್ಥಿಕ ತಜ್ಞರ ಅಭಿಪ್ರಾಯ ಎಂದರು.
ರಾಜಕೀಯ ಪಕ್ಷಗಳು ಸೃಜನಶೀಲ ಕಾಯಕ ಮತ್ತು ಉತ್ಪಾದನೆಗೆ ಬೆಂಬಲ ನೀಡಬೇಕೆಂದು ಅವರು ಸಲಹೆ ಕೊಟ್ಟರು.
2013 ಮತ್ತು ಈಗಿನ ರಾಜ್ಯಪಾಲರ ಭಾಷಣಗಳು ಯಥಾವತ್ತು ನಕಲಾಗಿವೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಆದ್ಯತೆ ನೀಡುವುದಾಗಿ ಉಲ್ಲೇಖಿಸಿರುವುದು ನಂಬಲರ್ಹವಲ್ಲ ಎಂದರು.
ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮತ್ತು ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…