ಬೆಂಗಳೂರು: ಅನ್ನಭಾಗ್ಯ, ಶಕ್ತಿ ಯೋಜನೆಗಳು ಬಡಜನರಿಗೆ ಸಾಕಷ್ಟು ನೆರವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.
ವಿಧಾನಮಂಡಲದ ಜಂಟಿ ಅವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು ಶಕ್ತಿ ಯೋಜನೆಗಳಿಂದ ರಾಜ್ಯದ ಪುರಾಣ ಪುಣ್ಯಕ್ಷೇತ್ರಗಳು, ದೇವಸ್ಥಾನಗಳು ತುಂಬಿ ತುಳುಕುತ್ತಿವೆ. ಅನ್ನಭಾಗ್ಯ ಯೋಜನೆ ಅತ್ಯಂತ ಮಹತ್ವದ್ದು. ಸಿದ್ದರಾಮಯ್ಯ ಅವರು ತಮ್ಮ ಅನುಭವದಿಂದ ಯೋಜನೆ ಜಾರಿಗೊಳಿಸಿದ್ದಾರೆ. ತಮಗೂ ಕೂಡ ಬಾಲ್ಯದಲ್ಲಿ ಅನ್ನದ ಮಹತ್ವ ಅರಿತುಕೊಳ್ಳುವಂತಹ ಅನುಭವಗಳಾಗಿವೆ ಎಂದರು.
ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದೆ ಇರುವುದು ಖಂಡನೀಯ. ಬಿಜೆಪಿಯವರು ಪಂಚ ಖಾತ್ರಿ ಯೋಜನೆಗಳನ್ನು ತಕ್ಷಣದಿಂದಲೇ ಜಾರಿಗೊಳಿಸಿ ಒತ್ತಾಯಿಸಿ ಪ್ರತಿಭಟನೆ ನಡೆಸುವ ನೈತಿಕ ಹಕ್ಕು ಹೊಂದಿಲ್ಲ. ಸರ್ಕಾರ ಹಣಕಾಸು ಸಂಪನ್ಮೂಲಗಳನ್ನು ಹೊಂದಿಸಿಕೊಂಡು ಜಾರಿ ಮಾಡಲಿ ಎಂದು ಸಲಹೆ ನೀಡಿದರು.
ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುವ ಜೊತೆಗೆ ಹಗಲು ವೇಳೆಗೆ ವಿದ್ಯುತ್ ನೀಡಬೇಕೆಂದು ಜಿ.ಟಿ.ದೇವೇಗೌಡ ಸಲಹೆ ನೀಡಿದರು.
ಹಿಂದೆ ಕಾಂಗ್ರೆಸ್ ಪಕ್ಷದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮಾಡಿತ್ತು. ಈಗ ಆ ಪಕ್ಷವೇ ಅಧಿಕಾರಕ್ಕೆ ಬಂದಿರುವುದರಿಂದ ದರವನ್ನು ಕಡಿಮೆ ಮಾಡುವುದು ಅವರ ಕರ್ತವ್ಯ ಎಂದು ಹೇಳಿದರು.
ವಚನ ಸಾಹಿತ್ಯ ಕಾಲದ ಸಿದ್ದಾಂತಗಳನ್ನು ಸ್ಮರಿಸಿಕೊಂಡ ಜಿ.ಟಿ.ದೇವೇಗೌಡ ಅವರು, ದುಡಿದು ತಿನ್ನುವುದು ಸೂಕ್ತ ಎಂದು ಶರಣರು ಹೇಳಿದ್ದಾರೆ. ಸರ್ಕಾರದ ಉಚಿತ ಖಾತ್ರಿಗಳು ಶ್ರಮಿಕರನ್ನು ದುಡಿಮೆಯಿಂದ ವಿಮುಖರನ್ನಾಗಿ ಮಾಡುತ್ತದೆ ಎಂದು ಆರ್ಥಿಕ ತಜ್ಞರ ಅಭಿಪ್ರಾಯ ಎಂದರು.
ರಾಜಕೀಯ ಪಕ್ಷಗಳು ಸೃಜನಶೀಲ ಕಾಯಕ ಮತ್ತು ಉತ್ಪಾದನೆಗೆ ಬೆಂಬಲ ನೀಡಬೇಕೆಂದು ಅವರು ಸಲಹೆ ಕೊಟ್ಟರು.
2013 ಮತ್ತು ಈಗಿನ ರಾಜ್ಯಪಾಲರ ಭಾಷಣಗಳು ಯಥಾವತ್ತು ನಕಲಾಗಿವೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಆದ್ಯತೆ ನೀಡುವುದಾಗಿ ಉಲ್ಲೇಖಿಸಿರುವುದು ನಂಬಲರ್ಹವಲ್ಲ ಎಂದರು.
ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮತ್ತು ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…
ಕಾರವಾರ: ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…
ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್, ಪ್ರಶಾಂತ್, ಚೇತನ್…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…