BREAKING NEWS

ಅನ್ನಭಾಗ್ಯ, ಶಕ್ತಿ ಯೋಜನೆಗಳು ಬಡಜನರಿಗೆ ಸಾಕಷ್ಟು ನೆರವಾಗಿದೆ: ಜಿಟಿಡಿ

ಬೆಂಗಳೂರು: ಅನ್ನಭಾಗ್ಯ, ಶಕ್ತಿ ಯೋಜನೆಗಳು ಬಡಜನರಿಗೆ ಸಾಕಷ್ಟು ನೆರವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಧಾನಮಂಡಲದ ಜಂಟಿ ಅವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು ಶಕ್ತಿ ಯೋಜನೆಗಳಿಂದ ರಾಜ್ಯದ ಪುರಾಣ ಪುಣ್ಯಕ್ಷೇತ್ರಗಳು, ದೇವಸ್ಥಾನಗಳು ತುಂಬಿ ತುಳುಕುತ್ತಿವೆ. ಅನ್ನಭಾಗ್ಯ ಯೋಜನೆ ಅತ್ಯಂತ ಮಹತ್ವದ್ದು. ಸಿದ್ದರಾಮಯ್ಯ ಅವರು ತಮ್ಮ ಅನುಭವದಿಂದ ಯೋಜನೆ ಜಾರಿಗೊಳಿಸಿದ್ದಾರೆ. ತಮಗೂ ಕೂಡ ಬಾಲ್ಯದಲ್ಲಿ ಅನ್ನದ ಮಹತ್ವ ಅರಿತುಕೊಳ್ಳುವಂತಹ ಅನುಭವಗಳಾಗಿವೆ ಎಂದರು.

ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದೆ ಇರುವುದು ಖಂಡನೀಯ. ಬಿಜೆಪಿಯವರು ಪಂಚ ಖಾತ್ರಿ ಯೋಜನೆಗಳನ್ನು ತಕ್ಷಣದಿಂದಲೇ ಜಾರಿಗೊಳಿಸಿ ಒತ್ತಾಯಿಸಿ ಪ್ರತಿಭಟನೆ ನಡೆಸುವ ನೈತಿಕ ಹಕ್ಕು ಹೊಂದಿಲ್ಲ. ಸರ್ಕಾರ ಹಣಕಾಸು ಸಂಪನ್ಮೂಲಗಳನ್ನು ಹೊಂದಿಸಿಕೊಂಡು ಜಾರಿ ಮಾಡಲಿ ಎಂದು ಸಲಹೆ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುವ ಜೊತೆಗೆ ಹಗಲು ವೇಳೆಗೆ ವಿದ್ಯುತ್ ನೀಡಬೇಕೆಂದು ಜಿ.ಟಿ.ದೇವೇಗೌಡ ಸಲಹೆ ನೀಡಿದರು.

ಹಿಂದೆ ಕಾಂಗ್ರೆಸ್ ಪಕ್ಷದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮಾಡಿತ್ತು. ಈಗ ಆ ಪಕ್ಷವೇ ಅಧಿಕಾರಕ್ಕೆ ಬಂದಿರುವುದರಿಂದ ದರವನ್ನು ಕಡಿಮೆ ಮಾಡುವುದು ಅವರ ಕರ್ತವ್ಯ ಎಂದು ಹೇಳಿದರು.

ವಚನ ಸಾಹಿತ್ಯ ಕಾಲದ ಸಿದ್ದಾಂತಗಳನ್ನು ಸ್ಮರಿಸಿಕೊಂಡ ಜಿ.ಟಿ.ದೇವೇಗೌಡ ಅವರು, ದುಡಿದು ತಿನ್ನುವುದು ಸೂಕ್ತ ಎಂದು ಶರಣರು ಹೇಳಿದ್ದಾರೆ. ಸರ್ಕಾರದ ಉಚಿತ ಖಾತ್ರಿಗಳು ಶ್ರಮಿಕರನ್ನು ದುಡಿಮೆಯಿಂದ ವಿಮುಖರನ್ನಾಗಿ ಮಾಡುತ್ತದೆ ಎಂದು ಆರ್ಥಿಕ ತಜ್ಞರ ಅಭಿಪ್ರಾಯ ಎಂದರು.

ರಾಜಕೀಯ ಪಕ್ಷಗಳು ಸೃಜನಶೀಲ ಕಾಯಕ ಮತ್ತು ಉತ್ಪಾದನೆಗೆ ಬೆಂಬಲ ನೀಡಬೇಕೆಂದು ಅವರು ಸಲಹೆ ಕೊಟ್ಟರು.

2013 ಮತ್ತು ಈಗಿನ ರಾಜ್ಯಪಾಲರ ಭಾಷಣಗಳು ಯಥಾವತ್ತು ನಕಲಾಗಿವೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಆದ್ಯತೆ ನೀಡುವುದಾಗಿ ಉಲ್ಲೇಖಿಸಿರುವುದು ನಂಬಲರ್ಹವಲ್ಲ ಎಂದರು.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮತ್ತು ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago