ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಭಾರತೀಯ ಆಹಾರ ನಿಗಮ ಅಕ್ಕಿ ಕೊಡಲು ನಿರಾಕರಿಸಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ಸಭೆ ನಿರ್ಧರಿಸಿದೆ.
ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನ ಖಾತೆಗೆ 5 ಕೆಜಿ ಅಕ್ಕಿ ಜೊತೆ ಇನ್ನುಳಿದ 5 ಕೆಜಿ ಅಕ್ಕಿ ಬದಲಿಗೆ ಮಾಸಿಕ ತಲಾ 170 ರುಪಾಯಿ ಹಣ ನೀಡಲು ಸಂಪುಟ ತೀರ್ಮಾನಿಸಿದೆ. ಜುಲೈ 1ರಿಂದಲೇ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ.
ಇಂದು ನಡೆದ ಸಂಪುಟ ಸಭೆ ಬಳಿಕ ಮಾತನಾಡಿದ ಆಹಾರ ಖಾತೆ ಸಚಿವ ಕೆಎಚ್ ಮುನಿಯಪ್ಪನವರು, ಹೆಚ್ಚುವರಿಯಾಗಿ ನೀಡಲು ತೀರ್ಮಾನಿಸಿದ್ದ 5 ಕೆಜಿ ಅಕ್ಕಿಯನ್ನು ಹೊಂದಿಸಲು ರಾಜ್ಯ ಸರ್ಕಾರಕ್ಕೆ ಇನ್ನಷ್ಟು ಸಮಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಕಿ ಕೊಡುವವರೆಗೂ ಹಣವನ್ನು ನೀಡಲಾಗುತ್ತದೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ.
ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…