ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಭಾರತೀಯ ಆಹಾರ ನಿಗಮ ಅಕ್ಕಿ ಕೊಡಲು ನಿರಾಕರಿಸಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ಸಭೆ ನಿರ್ಧರಿಸಿದೆ.
ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನ ಖಾತೆಗೆ 5 ಕೆಜಿ ಅಕ್ಕಿ ಜೊತೆ ಇನ್ನುಳಿದ 5 ಕೆಜಿ ಅಕ್ಕಿ ಬದಲಿಗೆ ಮಾಸಿಕ ತಲಾ 170 ರುಪಾಯಿ ಹಣ ನೀಡಲು ಸಂಪುಟ ತೀರ್ಮಾನಿಸಿದೆ. ಜುಲೈ 1ರಿಂದಲೇ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ.
ಇಂದು ನಡೆದ ಸಂಪುಟ ಸಭೆ ಬಳಿಕ ಮಾತನಾಡಿದ ಆಹಾರ ಖಾತೆ ಸಚಿವ ಕೆಎಚ್ ಮುನಿಯಪ್ಪನವರು, ಹೆಚ್ಚುವರಿಯಾಗಿ ನೀಡಲು ತೀರ್ಮಾನಿಸಿದ್ದ 5 ಕೆಜಿ ಅಕ್ಕಿಯನ್ನು ಹೊಂದಿಸಲು ರಾಜ್ಯ ಸರ್ಕಾರಕ್ಕೆ ಇನ್ನಷ್ಟು ಸಮಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಕಿ ಕೊಡುವವರೆಗೂ ಹಣವನ್ನು ನೀಡಲಾಗುತ್ತದೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ.
ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…