BREAKING NEWS

ಅನ್ನಭಾಗ್ಯ ಯೋಜನೆ: ಜುಲೈನಿಂದಲೇ 5 ಕೆಜಿ ಅಕ್ಕಿ ಬದಲಿಗೆ, ಹಣ ನೀಡಲು ಸಂಪುಟ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಭಾರತೀಯ ಆಹಾರ ನಿಗಮ ಅಕ್ಕಿ ಕೊಡಲು ನಿರಾಕರಿಸಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ಸಭೆ ನಿರ್ಧರಿಸಿದೆ.

ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನ ಖಾತೆಗೆ 5 ಕೆಜಿ ಅಕ್ಕಿ ಜೊತೆ ಇನ್ನುಳಿದ 5 ಕೆಜಿ ಅಕ್ಕಿ ಬದಲಿಗೆ ಮಾಸಿಕ ತಲಾ 170 ರುಪಾಯಿ ಹಣ ನೀಡಲು ಸಂಪುಟ ತೀರ್ಮಾನಿಸಿದೆ. ಜುಲೈ 1ರಿಂದಲೇ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ.

ಇಂದು ನಡೆದ ಸಂಪುಟ ಸಭೆ ಬಳಿಕ ಮಾತನಾಡಿದ ಆಹಾರ ಖಾತೆ ಸಚಿವ ಕೆಎಚ್ ಮುನಿಯಪ್ಪನವರು, ಹೆಚ್ಚುವರಿಯಾಗಿ ನೀಡಲು ತೀರ್ಮಾನಿಸಿದ್ದ 5 ಕೆಜಿ ಅಕ್ಕಿಯನ್ನು ಹೊಂದಿಸಲು ರಾಜ್ಯ ಸರ್ಕಾರಕ್ಕೆ ಇನ್ನಷ್ಟು ಸಮಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಕಿ ಕೊಡುವವರೆಗೂ ಹಣವನ್ನು ನೀಡಲಾಗುತ್ತದೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು

andolanait

Recent Posts

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

1 min ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

1 hour ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

2 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

3 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

3 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

5 hours ago