ಬೆಂಗಳೂರು: ರಾಜ್ಯದ 4 ಕೋಟಿ 42 ಲಕ್ಷ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ತಲಾ 170 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ತಲುಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಸೇರಿ 1.28 ಕೋಟಿ ಪಡಿತರ ಚೀಟಿದಾರರು ಇದ್ದಾರೆ ಒಟ್ಟಾರೆ 4.42 ಕೋಟಿ ಫಲಾನುಭವಿಗಳು ಇದ್ದಾರೆ. ಇದುವರೆಗೂ ಯಾವ ಫಲಾನುಭವಿಗಳು ಹಕ್ಕು ಪಡೆಯುತ್ತಿದ್ದಾರೋ ಅವರಿಗೆ ಹೆಚ್ಚುವರಿ ಅಕ್ಕಿ ನೀಡುವವರೆಗೂ ಪ್ರತಿ ಕೆಜಿ ಗೆ 34 ರೂ. ನಂತೆ ತಲಾ 170 ರೂ. ನೀಡುತ್ತೇವೆಂದು ಸ್ಪಷ್ಟನೆ ನೀಡಿದರು.
ಇದಕ್ಕೂ ಮುನ್ನ ಮಾತನಾಡಿದ ಕುಮಾರಸ್ವಾಮಿ, ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲಾಗುತ್ತಿಲ್ಲ ಎಂದು ಸರ್ಕಾರ ಹಣ ನೀಡುತ್ತಿದೆ ಅದಕ್ಕೆ ತಕರಾರು ಇಲ್ಲ ಆದರೆ ಅನ್ನಭಾಗ್ಯದ ಹಣ ವರ್ಗಾವಣೆ ಮಾಡಲು ಸಾಕಷ್ಟು ಅಡೆತಡೆಗಳಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದರು.
ಆ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾನೂನು ಸಚಿವ ಎಚ್ ಕೆ ಪಾಟೀಲ್ ಯಾವ ಅಧಿಕಾರಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ ಅವರ ಹೆಸರು ಹೇಳಿ ಅನ್ನಭಾಗ್ಯದ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ವಿಚಾರದಲ್ಲಿ ಸಮರ್ಥಿಸಿಕೊಂಡರು.
ಆಗ ಕುಮಾರಸ್ವಾಮಿ ಅವರು ಜನರನ್ನು ದಾರಿ ತಪ್ಪಿಸುವ ಅಧಿಕಾರಿಯನ್ನು ಗುರುತಿಸುವುದು ನಿಮ್ಮ ಜವಾಬ್ದಾರಿ ಎಂದು ಕಾನೂನು ಸಚಿವರಿಗೆ ತಿರುಗೇಟು ನೀಡಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…