ಬೆಂಗಳೂರು: ರಾಜ್ಯದ 4 ಕೋಟಿ 42 ಲಕ್ಷ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ತಲಾ 170 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ತಲುಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಸೇರಿ 1.28 ಕೋಟಿ ಪಡಿತರ ಚೀಟಿದಾರರು ಇದ್ದಾರೆ ಒಟ್ಟಾರೆ 4.42 ಕೋಟಿ ಫಲಾನುಭವಿಗಳು ಇದ್ದಾರೆ. ಇದುವರೆಗೂ ಯಾವ ಫಲಾನುಭವಿಗಳು ಹಕ್ಕು ಪಡೆಯುತ್ತಿದ್ದಾರೋ ಅವರಿಗೆ ಹೆಚ್ಚುವರಿ ಅಕ್ಕಿ ನೀಡುವವರೆಗೂ ಪ್ರತಿ ಕೆಜಿ ಗೆ 34 ರೂ. ನಂತೆ ತಲಾ 170 ರೂ. ನೀಡುತ್ತೇವೆಂದು ಸ್ಪಷ್ಟನೆ ನೀಡಿದರು.
ಇದಕ್ಕೂ ಮುನ್ನ ಮಾತನಾಡಿದ ಕುಮಾರಸ್ವಾಮಿ, ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲಾಗುತ್ತಿಲ್ಲ ಎಂದು ಸರ್ಕಾರ ಹಣ ನೀಡುತ್ತಿದೆ ಅದಕ್ಕೆ ತಕರಾರು ಇಲ್ಲ ಆದರೆ ಅನ್ನಭಾಗ್ಯದ ಹಣ ವರ್ಗಾವಣೆ ಮಾಡಲು ಸಾಕಷ್ಟು ಅಡೆತಡೆಗಳಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದರು.
ಆ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾನೂನು ಸಚಿವ ಎಚ್ ಕೆ ಪಾಟೀಲ್ ಯಾವ ಅಧಿಕಾರಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ ಅವರ ಹೆಸರು ಹೇಳಿ ಅನ್ನಭಾಗ್ಯದ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ವಿಚಾರದಲ್ಲಿ ಸಮರ್ಥಿಸಿಕೊಂಡರು.
ಆಗ ಕುಮಾರಸ್ವಾಮಿ ಅವರು ಜನರನ್ನು ದಾರಿ ತಪ್ಪಿಸುವ ಅಧಿಕಾರಿಯನ್ನು ಗುರುತಿಸುವುದು ನಿಮ್ಮ ಜವಾಬ್ದಾರಿ ಎಂದು ಕಾನೂನು ಸಚಿವರಿಗೆ ತಿರುಗೇಟು ನೀಡಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…