BREAKING NEWS

ಕನ್ಯಾಭಾಗ್ಯ ಘೋಷಣೆ ಮಾಡಿ : ಸಿದ್ದರಾಮಯ್ಯಗೆ ಯುವ ರೈತರ ಮನವಿ

ಹಾವೇರಿ : ಯುವ ರೈತರಿಗೆ ಕನ್ಯೆ ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವಕರು, ಸಿಎಂ ಸಿದ್ದರಾಮಯ್ಯ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ್ದಾರೆ.

ಹಾವೇರಿಯ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಮನವಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 5 ರಿಂದ 6 ಎಕರೆ ಜಮೀನು ಇದ್ದರು ಸಹಿತ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಕೃಷಿಕ ಎಂದ ಮಾತ್ರಕ್ಕೆ ಎಷ್ಟೋ ಜನ ಕನ್ಯೆಯನ್ನು ತೊರಿಸುತ್ತಿಲ್ಲ. 5 ಸಾವಿರ ಸಂಬಳ ಬರುವ ವ್ಯಕ್ತಿಗೆ ಹೆಣ್ಣು ಕೊಡಲು ಮುಂದಾಗುತ್ತಾರೆ.

ನಾವು ಕೂಡ ಉತ್ತಮ ಮಳೆ ಬಂದರೆ ಲಕ್ಷಾಂತರ ರೂಪಾಯಿ ಗಳಿಸುತ್ತೇವೆ. ಆದರೆ ಹವಾಮಾನ ವೈಪರೀತ್ಯದಿಂದ ನಷ್ಟ ಅನುಭವಿಸುತ್ತಿದ್ದೇವೆ. ಕೃಷಿ ಮಾಡುತ್ತಿರುವವರು ಕೂಡ ತನ್ನ ಮಗಳನ್ನು ಕೃಷಿಕನಿಗೆ ಕೊಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಯುವ ರೈತರನ್ನು ಮದುವೆ ಆದ ಯುವತಿಯರಿಗೆ ಕನಿಷ್ಠ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು.

ರೈತರನ್ನು ಮದುವೆ ಆದ ವಿದ್ಯಾವಂತ ಯುವತಿಯರಿಗೆ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಬೇಕು. ಮನೆಯೊಡತಿಗೆ 2 ಸಾವಿರ ಕೊಡುವ ಮಾದರಿಯಲ್ಲಿ ರೈತರನ್ನು ಮದುವೆ ಆದವರಿಗೂ ಹಣ ಕೊಡಬೇಕು. ಇಂತಹ ಕಾರ್ಯಕ್ರಮಗಳನ್ನೊಳಗೊಂಡ ಕನ್ಯಾಭಾಗ್ಯ ಯೋಜನೆ ಜಾರಿಗೆ ತರಬೇಕೆಂದು ಪತ್ರ ಮೂಲಕ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

lokesh

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

1 hour ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

1 hour ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

1 hour ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

2 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

2 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

9 hours ago