ಹಾವೇರಿ : ಯುವ ರೈತರಿಗೆ ಕನ್ಯೆ ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವಕರು, ಸಿಎಂ ಸಿದ್ದರಾಮಯ್ಯ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ್ದಾರೆ.
ಹಾವೇರಿಯ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಮನವಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 5 ರಿಂದ 6 ಎಕರೆ ಜಮೀನು ಇದ್ದರು ಸಹಿತ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಕೃಷಿಕ ಎಂದ ಮಾತ್ರಕ್ಕೆ ಎಷ್ಟೋ ಜನ ಕನ್ಯೆಯನ್ನು ತೊರಿಸುತ್ತಿಲ್ಲ. 5 ಸಾವಿರ ಸಂಬಳ ಬರುವ ವ್ಯಕ್ತಿಗೆ ಹೆಣ್ಣು ಕೊಡಲು ಮುಂದಾಗುತ್ತಾರೆ.
ನಾವು ಕೂಡ ಉತ್ತಮ ಮಳೆ ಬಂದರೆ ಲಕ್ಷಾಂತರ ರೂಪಾಯಿ ಗಳಿಸುತ್ತೇವೆ. ಆದರೆ ಹವಾಮಾನ ವೈಪರೀತ್ಯದಿಂದ ನಷ್ಟ ಅನುಭವಿಸುತ್ತಿದ್ದೇವೆ. ಕೃಷಿ ಮಾಡುತ್ತಿರುವವರು ಕೂಡ ತನ್ನ ಮಗಳನ್ನು ಕೃಷಿಕನಿಗೆ ಕೊಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಯುವ ರೈತರನ್ನು ಮದುವೆ ಆದ ಯುವತಿಯರಿಗೆ ಕನಿಷ್ಠ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು.
ರೈತರನ್ನು ಮದುವೆ ಆದ ವಿದ್ಯಾವಂತ ಯುವತಿಯರಿಗೆ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಬೇಕು. ಮನೆಯೊಡತಿಗೆ 2 ಸಾವಿರ ಕೊಡುವ ಮಾದರಿಯಲ್ಲಿ ರೈತರನ್ನು ಮದುವೆ ಆದವರಿಗೂ ಹಣ ಕೊಡಬೇಕು. ಇಂತಹ ಕಾರ್ಯಕ್ರಮಗಳನ್ನೊಳಗೊಂಡ ಕನ್ಯಾಭಾಗ್ಯ ಯೋಜನೆ ಜಾರಿಗೆ ತರಬೇಕೆಂದು ಪತ್ರ ಮೂಲಕ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…