BREAKING NEWS

ಕನ್ಯಾಭಾಗ್ಯ ಘೋಷಣೆ ಮಾಡಿ : ಸಿದ್ದರಾಮಯ್ಯಗೆ ಯುವ ರೈತರ ಮನವಿ

ಹಾವೇರಿ : ಯುವ ರೈತರಿಗೆ ಕನ್ಯೆ ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವಕರು, ಸಿಎಂ ಸಿದ್ದರಾಮಯ್ಯ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ್ದಾರೆ.

ಹಾವೇರಿಯ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಮನವಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 5 ರಿಂದ 6 ಎಕರೆ ಜಮೀನು ಇದ್ದರು ಸಹಿತ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಕೃಷಿಕ ಎಂದ ಮಾತ್ರಕ್ಕೆ ಎಷ್ಟೋ ಜನ ಕನ್ಯೆಯನ್ನು ತೊರಿಸುತ್ತಿಲ್ಲ. 5 ಸಾವಿರ ಸಂಬಳ ಬರುವ ವ್ಯಕ್ತಿಗೆ ಹೆಣ್ಣು ಕೊಡಲು ಮುಂದಾಗುತ್ತಾರೆ.

ನಾವು ಕೂಡ ಉತ್ತಮ ಮಳೆ ಬಂದರೆ ಲಕ್ಷಾಂತರ ರೂಪಾಯಿ ಗಳಿಸುತ್ತೇವೆ. ಆದರೆ ಹವಾಮಾನ ವೈಪರೀತ್ಯದಿಂದ ನಷ್ಟ ಅನುಭವಿಸುತ್ತಿದ್ದೇವೆ. ಕೃಷಿ ಮಾಡುತ್ತಿರುವವರು ಕೂಡ ತನ್ನ ಮಗಳನ್ನು ಕೃಷಿಕನಿಗೆ ಕೊಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಯುವ ರೈತರನ್ನು ಮದುವೆ ಆದ ಯುವತಿಯರಿಗೆ ಕನಿಷ್ಠ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು.

ರೈತರನ್ನು ಮದುವೆ ಆದ ವಿದ್ಯಾವಂತ ಯುವತಿಯರಿಗೆ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಬೇಕು. ಮನೆಯೊಡತಿಗೆ 2 ಸಾವಿರ ಕೊಡುವ ಮಾದರಿಯಲ್ಲಿ ರೈತರನ್ನು ಮದುವೆ ಆದವರಿಗೂ ಹಣ ಕೊಡಬೇಕು. ಇಂತಹ ಕಾರ್ಯಕ್ರಮಗಳನ್ನೊಳಗೊಂಡ ಕನ್ಯಾಭಾಗ್ಯ ಯೋಜನೆ ಜಾರಿಗೆ ತರಬೇಕೆಂದು ಪತ್ರ ಮೂಲಕ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago