ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಿಹಿ ಸುದ್ದಿ ನೀಡಿದ್ದು, ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ.
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದೆ.
ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ. 50 ರಷ್ಟು ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ಸಾರಿಗೆ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್ವುಡ್ನಲ್ಲಿ ಇಂದು ಕ್ರಿಸ್ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…