BREAKING NEWS

ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಿಹಿ ಸುದ್ದಿ ನೀಡಿದ್ದು, ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ.

ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ. 50 ರಷ್ಟು ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ಸಾರಿಗೆ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು.

andolanait

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

1 hour ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

2 hours ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

6 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

6 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

6 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

6 hours ago