BREAKING NEWS

ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಿಹಿ ಸುದ್ದಿ ನೀಡಿದ್ದು, ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ.

ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದೆ.

ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ. 50 ರಷ್ಟು ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ಸಾರಿಗೆ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು.

andolanait

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

14 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

18 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

23 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

34 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

39 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

45 mins ago