BREAKING NEWS

ಕರ್ನಾಟಕದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರಿನ ಘೋಷಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾವೆಲ್ಲರೂ ಕನ್ನಡ ಭಾಷೆಯಲ್ಲೇ ವ್ಯವಹರಿಸುತ್ತೇವೆ. ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ವ್ಯವಹರಿಸಲ್ಲ ಎಂದು ಪ್ರತಿಜ್ಞೆ ಮಾಡಬೇಕಾದ ಪರಿಸ್ಥಿತಿ ಇದೆ. ಭಾಷೆ, ನೆಲ, ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕಾಗದ್ದು ಅಗತ್ಯ. ಇದು ನನ್ನ ತಾಯಿ ನಾಡು, ಕನ್ನಡ ನನ್ನ ತಾಯಿ ಭಾಷೆ ಈ ನೆಲದಲ್ಲಿ ಹುಟ್ಟಿದ್ದೇನೆ, ಅದರ ಋಣ ತೀರಿಸಬೇಕಾದರೆ ಕನ್ನಡ ನೆಲ ಭಾಷೆ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕಾಗ ಕೆಲಸ ಮಾಡಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಂಠೀರವ ಮೈದಾನದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತಮಿಳು, ಮಲಯಾಳಂ, ತೆಲುವು ಭಾಷೆ ಮಾತನಾಡಿ ಬದುಕು ನಡೆಸಬಹುದಾದ ಪರಿಸ್ಥಿತಿ ಇದೆ. ಆದರೆ ಬೇರೆ ರಾಜ್ಯಗಳಲ್ಲಿ ಈ ಪರಿಸ್ಥಿತಿ ಇಲ್ಲ ಎಂದರು.

ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರಿನ ಘೋಷಣೆ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂದಿನಿಂದ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರನ್ನು ಕೊಡಲಾಗುವುದು ಎಂದು ಸಿಎಂ ಇದೇ ಸಂದರ್ಭದಲ್ಲಿ ಘೋಷಣೆ ಮಾಡಿದರು. ಶಿಕ್ಷಣ ಇಲಾಖೆಯ ಮನವಿಯ ಮೇರೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಘೋಷಣೆಯನ್ನು ಸಿಎಂ ಮಾಡಿದರು.

ಸರ್ಕಾರದ ಆಡಳಿತ ಕನ್ನಡ ಭಾಷೆಯಲ್ಲೇ ಆಗಬೇಕು. ಕೇಂದ್ರದ ಜೊತೆಗೆ ವ್ಯವಹರಿಸಬೇಕಾದ ಸಂದರ್ಭದಲ್ಲಿ ಇಂಗ್ಲಿಷ್ ಭಾಷೆ ಬಳಸಬೇಕು. ಆಡಳಿತ ಪರಿಣಾಮಕಾರಿಯಾಗಿ ಜನರನ್ನು ತಲುಪಬೇಕಾದರೆ ಕನ್ನಡ ಭಾಷೆಯನ್ನೇ ಬಳಸಬೇಕು. ಅಧಿಕಾರಿಗಳು ಮತ್ತು ರಾಜಕಾರಣಿಗಳು ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಹೇಳಿದರು.

ಮೈಸೂರು ರಾಜ್ಯಕ್ಕೆ ದೇವರಾಜ್ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದರು. ಇವತ್ತಿಗೆ 50 ವರ್ಷ ತುಂಬಿದೆ. ಇದರ ಸವಿ ನೆನಪಿಗಾಗಿ ರಾಜ್ಯದಲ್ಲಿ 1 ವರ್ಷ ಕರ್ನಾಟಕ ಸಂಭ್ರಮ 50 ಎಂಬ ಹೆಸರಿನ ಮೂಲಕ ನಮ್ಮ ಸಾಹಿತ್ಯ, ಜಾನಪತ, ಕಲೆ, ಸಂಸ್ಕತಿ, ಸಂಪ್ರದಾಯವನ್ನು ಇಡೀ ವರ್ಷ ರಾಜ್ಯದ ಉದ್ದಗಲಕ್ಕೆ ತಿಳಿಸುವ ಕೆಲಸ ಮಾಡಲಿದ್ದೇವೆ ಎಂದರು. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷಾ ವಾಕ್ಯದೊಂದಿಗೆ ರಾಜ್ಯಾದ್ಯಂತ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಹಿಂದಿನ ಸರ್ಕಾರ ಮಾಡದೆ ಇದ್ದ ಕಾರಣಕ್ಕಾಗಿ ಆಯವ್ಯಯ ಭಾಷಣದಲ್ಲಿ ಕರ್ನಾಟಕ ಸಂಭ್ರಮ ವರ್ಷ ಆಚರಣೆಯ ಘೋಷಣೆ ಮಾಡಿದ್ದೆ. ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಕೇಂದ್ರಕ್ಕೆ ಪತ್ರ

ಕೇಂದ್ರ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ನಮ್ಮ ಮಕ್ಕಳಿಗೆ ತಿಳಿದಿರುವ ಭಾಷೆಯಲ್ಲಿ ಪರೀಕ್ಷೆ ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆಯುತ್ತೇನೆ ಎಂದರು.

ಕಲಿಕೆ ಕನ್ನಡ ಮಾಧ್ಯಮದ ಮೂಲಕ ಆಗಬೇಕು. ಆದರೆ ಇತ್ತೀಚೆಗೆ ಸರ್ಕಾರಿ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳು ಕಡಿಮೆಯಾಗಿ ಖಾಸಗಿ ಇಂಗ್ಲಿಷ್ ಶಾಲೆಗಳಿಗೆ ಹೋಗುವ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಅಪಾಯಕಾರಿ ನಡೆ. ಕನ್ನಡದಲ್ಲಿ ಓದಿದರೆ ಉದ್ಯೋಗ ಸಿಗುವುದಿಲ್ಲ ಎಂಬ ತಪ್ಪು ಕಲ್ಪನೆ ಸರಿಯಲ್ಲ ಎಂದರು.

ರಾಜ್ಯದ ಅನೇನ ಜನ ವಿಜ್ಞಾನಿಗಳು ಕನ್ನಡದಲ್ಲೇ ಓದಿ ದೊಡ್ಡ ಸಾಧನೆ ಮಾಡಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲೇ ಓದಬೇಕು ಎಂಬುವುದು ತಪ್ಪು ಕಲ್ಪನೆ. ಪೋಷಕರಿಗೆ ಮಕ್ಕಳು ಯಾವ ಭಾಷೆಯಲ್ಲಿ ಕಲಿಯಬೇಕು ಎಂದುನಿರ್ಧರಿಸುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಇದರಿಂದ ನಮ್ಮ ಪ್ರಯತ್ನಕ್ಕೆ ಹಿನ್ನಡೆಯಾಗಿದೆ ಎಂದರು.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

11 hours ago