BREAKING NEWS

ವಾರ್ಷಿಕ ವೈದ್ಯಕೀಯ ರ‍್ಯಾಂಕಿಂಗ್‌: ನಿಮಾನ್ಸ್’ಗೆ ನಾಲ್ಕನೇ ಸ್ಥಾನ

ಬೆಂಗಳೂರು: ನಿಮಾನ್ಸ್ ಮತ್ತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್‌ ಪಟ್ಟಿಯ ವೈದ್ಯಕೀಯ ರ‍್ಯಾಂಕಿಂಗ್‌ ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

ರಾಜ್ಯದ ವೈದ್ಯಕೀಯ ಕಾಲೇಜುಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ನಿರೀಕ್ಷೆಯಂತೆಯೇ ದಿಲ್ಲಿಯ ಏಮ್ಸ್ ಈ ರಾಷ್ಟ್ರೀಯ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ತಮಿಳು ನಾಡಿನ ವೆಲ್ಲೂರಿನಲ್ಲಿ ಕ್ರಿಶ್ಚಿನ್ ಮೆಡಿಕಲ್ ಕಾಲೇಜ್ ಮೂರನೇ ಸ್ಥಾನದಲ್ಲಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್ ರಾಜನ್ ಸಿಂಗ್ ಸೋಮವಾರ ವಾರ್ಷಿಕ ರ‍್ಯಾಂಕಿಂಗ್‌ ಪಟ್ಟಿಯನ್ನು ನವ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.

ಮಣಿಪಾಲದ ಕಸ್ತುರ್ಬಾ ಮೆಡಿಕಲ್ ಕಾಲೇಜು ಟಾಪ್ 10ರ ಪಟ್ಟಿಯಲ್ಲಿದ್ದು, 9ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿ ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜು 14 ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜು 20ನೇ ಸ್ಥಾನ, ಮಂಗಳೂರಿನ ಕಸ್ತುರ್ಬಾ ಮೆಡಿಕಲ್ ಕಾಲೇಜು 21 ಸ್ಥಾನ ಪಡೆದಿವೆ. ಬೆಂಗಳೂರಿನ ಎಂ ಎಸ್ ರಾಮಯ್ಯ ಮೆಡಿಕಲ್ ಕಾಲೇಜು 30 ನೇ ಸ್ಥಾನದಲ್ಲಿದೆ. ಮಂಗಳೂರಿನ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ 36ನೇ ಸ್ಥಾನ ಪಡೆದುಕೊಂಡಿದೆ.

ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯಲ್ಲಿ ಸುರತ್ಕಲ್‌ನ ಎನ್‌ಐಟಿ ಮೊದಲ ಸ್ಥಾನ ಪಡೆದುಕೊಂಡಿದೆ. ರಾಷ್ಟ್ರೀಯ ಪಟ್ಟಿಯಲ್ಲಿ ಈ ಕಾಲೇಜು 13ನೇ ಸ್ಥಾನದಲ್ಲಿದೆ. ಮಣಿಪಾಲ್‌ನ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 45ನೇ ಸ್ಥಾನ ಪಡೆದುಕೊಂಡಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 55 ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 59ನೇ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್ ಟೆಕ್ನಾಲಜಿ 62 ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜು 70 ನೇ ಸ್ಥಾನದಲ್ಲಿದೆ. ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ 73, ತುಮಕೂರಿನ ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 91, ಬೆಂಗಳೂರಿನ ಪಿಇಎಸ್ ಯೂನಿರ್ವಸಿಟಿ 93 ನೇ ಸ್ಥಾನ ಪಡೆದುಕೊಂಡಿವೆ.

andolanait

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

27 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

51 mins ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

3 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago