BREAKING NEWS

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು: 4 ತಿಂಗಳಲ್ಲಿ 8ನೇ ಮರಣ!

ಮಧ್ಯ ಪ್ರದೇಶ: ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರೆದಿದೆ. ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಗಂಡು ಚೀತಾ ಇದೀಗ ಸಾವನ್ನಪ್ಪಿದ್ದು, ಕಳೆದ ನಾಲ್ಕು ತಿಂಗಳಲ್ಲಿ ಮೃತಪಟ್ಟ 8ನೇ ಚೀತಾ ಇದಾಗಿದೆ.

ಗುರುವಾರ ಬೆಳಗ್ಗೆ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಸೂರಜ್ ಎಂಬ ಹೆಸರಿನ ಆಫ್ರಿಕಾ ಮೂಲದ ಚೀತಾದ ಮೃತ ದೇಹ ಪತ್ತೆಯಾಗಿದೆ. ಕುನೋ ರಾಷ್ಟ್ರೀಯ ಉದ್ಯಾನದ ಅಧಿಕಾರಿಗಳು ಸೂರಜ್ ಚೀತಾ ಸಾವಿಗೆ ನಿಖರ ಕಾರಣವೇನು ಎಂದು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ. ಚೀತಾದ ಮರಣೋತ್ತರ ಪರೀಕ್ಷಾ ವರದಿಯು ಇದರ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲಿದೆ.

ಕಳೆದ ಮಂಗಳವಾರ ಕೂಡಾ ತೇಜಸ್ ಹೆಸರಿನ ಗಂಡು ಚೀತಾ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಸಾವನ್ನಪ್ಪಿತ್ತು. ಹೆಣ್ಣು ಚೀತಾ ಜೊತೆಗಿನ ಕಾದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ತೇಜಸ್ ಚೀತಾ ಚೇತರಿಕೆ ಕಾಣದೆ ಸಾವನ್ನಪ್ಪಿತ್ತು. ಮರಣೋತ್ತರ ಪರೀಕ್ಷಾ ವರದಿ ಕೂಡಾ ಇದೇ ಅಂಶವನ್ನು ಬಹಿರಂಗಪಡಿಸಿತ್ತು.

ಕಳೆದ ಮಾರ್ಚ್ 27 ರಂದು ಸಾಶಾ ಹೆಸರಿನ ಹೆಣ್ಣು ಚೀತಾ ಸಾವನ್ನಪ್ಪಿತ್ತು. ಕಿಡ್ನಿ ವೈಫಲ್ಯದಿಂದ ಈ ಚೀತಾ ಕೊನೆಯುಸಿರೆಳೆದಿತ್ತು. ಏಪ್ರಿಲ್ 23 ರಂದು ಉದಯ್ ಹೆಸರಿನ ಗಂಡು ಚೀತಾ ಹೃದಯ ಸಂಬಂಧಿ ಸಮಸ್ಯೆಯಿಂದ ಸಾವನ್ನಪ್ಪಿತ್ತು. ಇನ್ನು ಮೇ 9 ರಂದು ದಿಶಾ ಎಂಬ ಹೆಣ್ಣು ಚೀತಾ ಕೂಡಾ ಸಾವನ್ನಪ್ಪಿತ್ತು. ಗಂಡು ಚೀತಾ ಜೊತೆ ಮಿಲನದ ವೇಳೆ ಕಾದಾಟ ನಡೆದು ಈ ಚೀತಾ ಕೊನೆಯುಸಿರೆಳೆದಿತ್ತು. ಇದಲ್ಲದೆ ಮೇ 25 ರಂದು ಹವಾಮಾನ ವೈಪರೀತ್ಯದಿಂದ ನಿರ್ಜಲೀಕರಣಕ್ಕೆ ಒಳಗಾಗಿ ಎರಡು ಚೀತಾ ಮರಿಗಳು ಸಾವನ್ನಪ್ಪಿದ್ದವು.

ಭಾರತದಲ್ಲಿ ಕಣ್ಮರೆಯಾದ ಚೀತಾ ಪ್ರಬೇಧಗಳನ್ನು ಪುನರ್‌ ಸ್ಥಾಪನೆ ಮಾಡಬೇಕೆಂಬುದು ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆಫ್ರಿಕಾದಿಂದ ಚೀತಾಗಳನ್ನು ತರಿಸಲಾಗಿತ್ತು. ಆದರೆ ಈವರೆಗೆ 8 ಚೀತಾಗಳು ಸಾವನ್ನಪ್ಪಿದ್ದು, ಕೇಂದ್ರ ಸರ್ಕಾರದ ಯೋಜನೆಗೆ ಭಾರೀ ಹಿನ್ನಡೆಯಾಗಿದೆ.

ಈ ಹಿಂದೆ 6 ಚೀತಾಗಳು ಸಾವನ್ನಪ್ಪಿದ್ದ ವೇಳೆ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರ್ವಹಣಾ ಲೋಪ ಇದೆಯೇ ಎಂಬ ಆರೋಪಗಳು ಕೇಳಿ ಬಂದಿದ್ದವು. ಆದ್ರೆ, ಕೇಂದ್ರ ಸರ್ಕಾರ ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿತ್ತು. ಚೀತಾಗಳ ಸಾವಿಗೆ ನಿರ್ವಹಣಾ ಲೋಪ ಕಾರಣವಲ್ಲ ಎಂದು ಹೇಳಿತ್ತು. ಇನ್ನು ಮೂರು ಚೀತಾ ಮರಿಗಳ ಸಾವಿನ ವಿಚಾರದಲ್ಲೂ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿತ್ತು. ಜಾಗತಿಕ ವನ್ಯಜೀವಿ ಅಂಕಿ ಅಂಶಗಳ ಪ್ರಕಾರ ನವಜಾತ ಚೀತಾ ಮರಿಗಳ ಮರಣ ಪ್ರಮಾಣ ಶೇ. 90ರಷ್ಟು ಇದೆ ಎಂದು ಮಾಹಿತಿ ನೀಡಿತ್ತು.

ಭಾರತಕ್ಕೆ ಚೀತಾಗಳನ್ನು ತರುವ ವಿಚಾರ ಸಂಬಂಧ ಕಳೆದ ಮೇನಲ್ಲಿ ಪ್ರತಿಕ್ರಿಯೆ ನೀಡಿದ್ದ ದಕ್ಷಿಣ ಆಫ್ರಿಕಾ ವನ್ಯಜೀವಿ ತಜ್ಞ ವಿನ್ಸೆಂಟ್ ವಾನ್ ಡೆರ್ ಮರ್ವೆ, ಸಾಕಷ್ಟು ಚೀತಾಗಳು ಸಾವನ್ನಪ್ಪುತ್ತವೆ ಎಂದು ಭವಿಷ್ಯ ನುಡಿದಿದ್ದರು. ಚೀತಾಗಳು ತಮ್ಮ ಗಡಿಯನ್ನು ನಿಗದಿ ಮಾಡಿಕೊಳ್ಳುವ ವೇಳೆ ಅರಣ್ಯದಲ್ಲಿ ಚಿರತೆ ಹಾಗೂ ಹುಲಿಗಳ ಜೊತೆ ಕಾದಾಟ ನಡೆಸುವ ಸಾಧ್ಯತೆಗಳು ಇರುತ್ತವೆ ಎಂದೂ ಹೇಳಿದ್ದರು.

andolanait

Recent Posts

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

2 mins ago

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…

26 mins ago

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

1 hour ago

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

9 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

9 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

9 hours ago