ಮಧ್ಯ ಪ್ರದೇಶ: ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರೆದಿದೆ. ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಗಂಡು ಚೀತಾ ಇದೀಗ ಸಾವನ್ನಪ್ಪಿದ್ದು, ಕಳೆದ ನಾಲ್ಕು ತಿಂಗಳಲ್ಲಿ ಮೃತಪಟ್ಟ 8ನೇ ಚೀತಾ ಇದಾಗಿದೆ.
ಗುರುವಾರ ಬೆಳಗ್ಗೆ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಸೂರಜ್ ಎಂಬ ಹೆಸರಿನ ಆಫ್ರಿಕಾ ಮೂಲದ ಚೀತಾದ ಮೃತ ದೇಹ ಪತ್ತೆಯಾಗಿದೆ. ಕುನೋ ರಾಷ್ಟ್ರೀಯ ಉದ್ಯಾನದ ಅಧಿಕಾರಿಗಳು ಸೂರಜ್ ಚೀತಾ ಸಾವಿಗೆ ನಿಖರ ಕಾರಣವೇನು ಎಂದು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ. ಚೀತಾದ ಮರಣೋತ್ತರ ಪರೀಕ್ಷಾ ವರದಿಯು ಇದರ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲಿದೆ.
ಕಳೆದ ಮಂಗಳವಾರ ಕೂಡಾ ತೇಜಸ್ ಹೆಸರಿನ ಗಂಡು ಚೀತಾ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಸಾವನ್ನಪ್ಪಿತ್ತು. ಹೆಣ್ಣು ಚೀತಾ ಜೊತೆಗಿನ ಕಾದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ತೇಜಸ್ ಚೀತಾ ಚೇತರಿಕೆ ಕಾಣದೆ ಸಾವನ್ನಪ್ಪಿತ್ತು. ಮರಣೋತ್ತರ ಪರೀಕ್ಷಾ ವರದಿ ಕೂಡಾ ಇದೇ ಅಂಶವನ್ನು ಬಹಿರಂಗಪಡಿಸಿತ್ತು.
ಕಳೆದ ಮಾರ್ಚ್ 27 ರಂದು ಸಾಶಾ ಹೆಸರಿನ ಹೆಣ್ಣು ಚೀತಾ ಸಾವನ್ನಪ್ಪಿತ್ತು. ಕಿಡ್ನಿ ವೈಫಲ್ಯದಿಂದ ಈ ಚೀತಾ ಕೊನೆಯುಸಿರೆಳೆದಿತ್ತು. ಏಪ್ರಿಲ್ 23 ರಂದು ಉದಯ್ ಹೆಸರಿನ ಗಂಡು ಚೀತಾ ಹೃದಯ ಸಂಬಂಧಿ ಸಮಸ್ಯೆಯಿಂದ ಸಾವನ್ನಪ್ಪಿತ್ತು. ಇನ್ನು ಮೇ 9 ರಂದು ದಿಶಾ ಎಂಬ ಹೆಣ್ಣು ಚೀತಾ ಕೂಡಾ ಸಾವನ್ನಪ್ಪಿತ್ತು. ಗಂಡು ಚೀತಾ ಜೊತೆ ಮಿಲನದ ವೇಳೆ ಕಾದಾಟ ನಡೆದು ಈ ಚೀತಾ ಕೊನೆಯುಸಿರೆಳೆದಿತ್ತು. ಇದಲ್ಲದೆ ಮೇ 25 ರಂದು ಹವಾಮಾನ ವೈಪರೀತ್ಯದಿಂದ ನಿರ್ಜಲೀಕರಣಕ್ಕೆ ಒಳಗಾಗಿ ಎರಡು ಚೀತಾ ಮರಿಗಳು ಸಾವನ್ನಪ್ಪಿದ್ದವು.
ಭಾರತದಲ್ಲಿ ಕಣ್ಮರೆಯಾದ ಚೀತಾ ಪ್ರಬೇಧಗಳನ್ನು ಪುನರ್ ಸ್ಥಾಪನೆ ಮಾಡಬೇಕೆಂಬುದು ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಆಫ್ರಿಕಾದಿಂದ ಚೀತಾಗಳನ್ನು ತರಿಸಲಾಗಿತ್ತು. ಆದರೆ ಈವರೆಗೆ 8 ಚೀತಾಗಳು ಸಾವನ್ನಪ್ಪಿದ್ದು, ಕೇಂದ್ರ ಸರ್ಕಾರದ ಯೋಜನೆಗೆ ಭಾರೀ ಹಿನ್ನಡೆಯಾಗಿದೆ.
ಈ ಹಿಂದೆ 6 ಚೀತಾಗಳು ಸಾವನ್ನಪ್ಪಿದ್ದ ವೇಳೆ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರ್ವಹಣಾ ಲೋಪ ಇದೆಯೇ ಎಂಬ ಆರೋಪಗಳು ಕೇಳಿ ಬಂದಿದ್ದವು. ಆದ್ರೆ, ಕೇಂದ್ರ ಸರ್ಕಾರ ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿತ್ತು. ಚೀತಾಗಳ ಸಾವಿಗೆ ನಿರ್ವಹಣಾ ಲೋಪ ಕಾರಣವಲ್ಲ ಎಂದು ಹೇಳಿತ್ತು. ಇನ್ನು ಮೂರು ಚೀತಾ ಮರಿಗಳ ಸಾವಿನ ವಿಚಾರದಲ್ಲೂ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿತ್ತು. ಜಾಗತಿಕ ವನ್ಯಜೀವಿ ಅಂಕಿ ಅಂಶಗಳ ಪ್ರಕಾರ ನವಜಾತ ಚೀತಾ ಮರಿಗಳ ಮರಣ ಪ್ರಮಾಣ ಶೇ. 90ರಷ್ಟು ಇದೆ ಎಂದು ಮಾಹಿತಿ ನೀಡಿತ್ತು.
ಭಾರತಕ್ಕೆ ಚೀತಾಗಳನ್ನು ತರುವ ವಿಚಾರ ಸಂಬಂಧ ಕಳೆದ ಮೇನಲ್ಲಿ ಪ್ರತಿಕ್ರಿಯೆ ನೀಡಿದ್ದ ದಕ್ಷಿಣ ಆಫ್ರಿಕಾ ವನ್ಯಜೀವಿ ತಜ್ಞ ವಿನ್ಸೆಂಟ್ ವಾನ್ ಡೆರ್ ಮರ್ವೆ, ಸಾಕಷ್ಟು ಚೀತಾಗಳು ಸಾವನ್ನಪ್ಪುತ್ತವೆ ಎಂದು ಭವಿಷ್ಯ ನುಡಿದಿದ್ದರು. ಚೀತಾಗಳು ತಮ್ಮ ಗಡಿಯನ್ನು ನಿಗದಿ ಮಾಡಿಕೊಳ್ಳುವ ವೇಳೆ ಅರಣ್ಯದಲ್ಲಿ ಚಿರತೆ ಹಾಗೂ ಹುಲಿಗಳ ಜೊತೆ ಕಾದಾಟ ನಡೆಸುವ ಸಾಧ್ಯತೆಗಳು ಇರುತ್ತವೆ ಎಂದೂ ಹೇಳಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…