BREAKING NEWS

ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದ್ದ ಮತ್ತೊಂದು ಚೀತಾ ಸಾವು

ಕುನೋ : ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ. ಅನಾರೋಗ್ಯದಿಂದ 6 ವರ್ಷದ ಗಂಡು ಚೀತಾ ‘ಉದಯ್’​ ಮೃತಪಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ‘ಸಾಶಾ’ ಹೆಸರಿನ ಚೀತಾ ಕೆಲತಿಂಗಳ ಹಿಂದೆ ಮೃತಪಟ್ಟಿತ್ತು. ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು.

ಏಪ್ರಿಲ್​ 23ರ ಭಾನುವಾರ ಬೆಳಗ್ಗೆಯಿಂದ ಅಸ್ವಸ್ಥಗೊಂಡಿದ್ದ ಚೀತಾವನ್ನು ವನ್ಯಜೀವಿ ವೈದ್ಯರು ಚಿಕಿತ್ಸೆ ಮತ್ತು ಮೇಲ್ವಿಚಾರಣೆಗಾಗಿ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ 4 ಗಂಟೆ ಸಮಯದಲ್ಲಿ ಚೀತಾ ಮೃತಪಟ್ಟಿದೆ. ಉದಯ್ ಚೀತಾ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ್ ಮಾಹಿತಿ ನೀಡಿದ್ದಾರೆ. ಪಶುವೈದ್ಯಕೀಯ ತಂಡ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಲಿದೆ. ಸಂಪೂರ್ಣ ಮರಣೋತ್ತರ ಪರೀಕ್ಷೆಯನ್ನು ವಿಡಿಯೋ ಮತ್ತು ಛಾಯಾಗ್ರಹಣ ಮಾಡಲಾಗುತ್ತದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವದ ಚೀತಾ ಯೋಜನೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಕುನೋ ನ್ಯಾಷನಲ್​ ಪಾರ್ಕ್​ಗೆ ತರಲಾಗಿದ್ದ ಚೀತಾ ಸಾಶಾ ಕಳೆದ ಮಾರ್ಚ್ ತಿಂಗಳಲ್ಲಿ ಸಾವನ್ನಪ್ಪಿತ್ತು. ಕಳೆದ 3 ತಿಂಗಳಿಂದ ಈ ಚೀತಾ ಅನಾರೋಗ್ಯದಿಂದ ಬಳಲುತ್ತಿದ್ದು ಅದರ ಸಾವಿಗೆ ಕಿಡ್ನಿ ಸೋಂಕು ಕಾರಣ ಎಂದು ತಿಳಿದುಬಂದಿತ್ತು. ಆದ್ರೆ ಉದಯ್ ಚೀತಾ ಸಾವಿಗೆ ಮರಣೋತ್ತರ ಪರೀಕ್ಷೆ ವರದಿ ಬಳಿಕ ಕಾರಣ ತಿಳಿಯಲಿದೆ.

ಈ ವರ್ಷ ಫೆಬ್ರವರಿ 18 ರಂದು ಇತರ 11 ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಕುನೊಗೆ ಕರೆತರಲಾಗಿತು. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಇದು ಎರಡನೇ ಚೀತಾ ಸಾವಾಗಿದೆ. ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಇಪ್ಪತ್ತು ಚೀತಾಗಳನ್ನು ತರಲಾಗಿತು. ಕಳೆದ ವರ್ಷ ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಪರಿಚಯಿಸಲಾದ ಎಂಟು ಚೀತಾಗಳಲ್ಲಿ ಒಂದಾದ ಸಾಶಾ ಮಾರ್ಚ್‌ನಲ್ಲಿ ಮೃತಪಟ್ಟಿತ್ತು. ಭಾನುವಾರ ಎರಡನೇ ಚೀತಾ ಸಾವಿನೊಂದಿಗೆ, ಈಗ ಚೀತಾಗಳ ಸಂಖ್ಯೆ 18 ಕ್ಕೆ ಇಳಿದಿದೆ.

lokesh

Recent Posts

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

32 mins ago

ಓದುಗರ ಪತ್ರ: ಮರಗಳ ಹನನ ಏಕೆ?

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…

34 mins ago

ಓದುಗರ ಪತ್ರ: ಎಥೆನಾಲ್: ಪ್ರಚಾರದ ಗಿಮಿಕ್ಕೋ?

ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್‌ನಂತೆ ಕಾಣುತ್ತಿದೆ. ಪೆಟ್ರೋಲ್‌ಗೆ ಶೇ.೨೦ ಮಿಶ್ರಣದ ಗುರಿ ಮತ್ತು…

36 mins ago

ಓದುಗರ ಪತ್ರ: ದುಡ್ಡಿಗೆ ಬೆಲೆ ಇಲ್ಲವೇ?

ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ…

39 mins ago

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

14 hours ago