BREAKING NEWS

ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದ್ದ ಮತ್ತೊಂದು ಚೀತಾ ಸಾವು

ಕುನೋ : ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ. ಅನಾರೋಗ್ಯದಿಂದ 6 ವರ್ಷದ ಗಂಡು ಚೀತಾ ‘ಉದಯ್’​ ಮೃತಪಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ‘ಸಾಶಾ’ ಹೆಸರಿನ ಚೀತಾ ಕೆಲತಿಂಗಳ ಹಿಂದೆ ಮೃತಪಟ್ಟಿತ್ತು. ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು.

ಏಪ್ರಿಲ್​ 23ರ ಭಾನುವಾರ ಬೆಳಗ್ಗೆಯಿಂದ ಅಸ್ವಸ್ಥಗೊಂಡಿದ್ದ ಚೀತಾವನ್ನು ವನ್ಯಜೀವಿ ವೈದ್ಯರು ಚಿಕಿತ್ಸೆ ಮತ್ತು ಮೇಲ್ವಿಚಾರಣೆಗಾಗಿ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ 4 ಗಂಟೆ ಸಮಯದಲ್ಲಿ ಚೀತಾ ಮೃತಪಟ್ಟಿದೆ. ಉದಯ್ ಚೀತಾ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ್ ಮಾಹಿತಿ ನೀಡಿದ್ದಾರೆ. ಪಶುವೈದ್ಯಕೀಯ ತಂಡ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಲಿದೆ. ಸಂಪೂರ್ಣ ಮರಣೋತ್ತರ ಪರೀಕ್ಷೆಯನ್ನು ವಿಡಿಯೋ ಮತ್ತು ಛಾಯಾಗ್ರಹಣ ಮಾಡಲಾಗುತ್ತದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವದ ಚೀತಾ ಯೋಜನೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಕುನೋ ನ್ಯಾಷನಲ್​ ಪಾರ್ಕ್​ಗೆ ತರಲಾಗಿದ್ದ ಚೀತಾ ಸಾಶಾ ಕಳೆದ ಮಾರ್ಚ್ ತಿಂಗಳಲ್ಲಿ ಸಾವನ್ನಪ್ಪಿತ್ತು. ಕಳೆದ 3 ತಿಂಗಳಿಂದ ಈ ಚೀತಾ ಅನಾರೋಗ್ಯದಿಂದ ಬಳಲುತ್ತಿದ್ದು ಅದರ ಸಾವಿಗೆ ಕಿಡ್ನಿ ಸೋಂಕು ಕಾರಣ ಎಂದು ತಿಳಿದುಬಂದಿತ್ತು. ಆದ್ರೆ ಉದಯ್ ಚೀತಾ ಸಾವಿಗೆ ಮರಣೋತ್ತರ ಪರೀಕ್ಷೆ ವರದಿ ಬಳಿಕ ಕಾರಣ ತಿಳಿಯಲಿದೆ.

ಈ ವರ್ಷ ಫೆಬ್ರವರಿ 18 ರಂದು ಇತರ 11 ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಕುನೊಗೆ ಕರೆತರಲಾಗಿತು. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಇದು ಎರಡನೇ ಚೀತಾ ಸಾವಾಗಿದೆ. ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಇಪ್ಪತ್ತು ಚೀತಾಗಳನ್ನು ತರಲಾಗಿತು. ಕಳೆದ ವರ್ಷ ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಪರಿಚಯಿಸಲಾದ ಎಂಟು ಚೀತಾಗಳಲ್ಲಿ ಒಂದಾದ ಸಾಶಾ ಮಾರ್ಚ್‌ನಲ್ಲಿ ಮೃತಪಟ್ಟಿತ್ತು. ಭಾನುವಾರ ಎರಡನೇ ಚೀತಾ ಸಾವಿನೊಂದಿಗೆ, ಈಗ ಚೀತಾಗಳ ಸಂಖ್ಯೆ 18 ಕ್ಕೆ ಇಳಿದಿದೆ.

lokesh

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

11 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

11 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

11 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

11 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

11 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

12 hours ago