BREAKING NEWS

ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದ್ದ ಮತ್ತೊಂದು ಚೀತಾ ಸಾವು

ಕುನೋ : ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ. ಅನಾರೋಗ್ಯದಿಂದ 6 ವರ್ಷದ ಗಂಡು ಚೀತಾ ‘ಉದಯ್’​ ಮೃತಪಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ‘ಸಾಶಾ’ ಹೆಸರಿನ ಚೀತಾ ಕೆಲತಿಂಗಳ ಹಿಂದೆ ಮೃತಪಟ್ಟಿತ್ತು. ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು.

ಏಪ್ರಿಲ್​ 23ರ ಭಾನುವಾರ ಬೆಳಗ್ಗೆಯಿಂದ ಅಸ್ವಸ್ಥಗೊಂಡಿದ್ದ ಚೀತಾವನ್ನು ವನ್ಯಜೀವಿ ವೈದ್ಯರು ಚಿಕಿತ್ಸೆ ಮತ್ತು ಮೇಲ್ವಿಚಾರಣೆಗಾಗಿ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ 4 ಗಂಟೆ ಸಮಯದಲ್ಲಿ ಚೀತಾ ಮೃತಪಟ್ಟಿದೆ. ಉದಯ್ ಚೀತಾ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ್ ಮಾಹಿತಿ ನೀಡಿದ್ದಾರೆ. ಪಶುವೈದ್ಯಕೀಯ ತಂಡ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಲಿದೆ. ಸಂಪೂರ್ಣ ಮರಣೋತ್ತರ ಪರೀಕ್ಷೆಯನ್ನು ವಿಡಿಯೋ ಮತ್ತು ಛಾಯಾಗ್ರಹಣ ಮಾಡಲಾಗುತ್ತದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವದ ಚೀತಾ ಯೋಜನೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಕುನೋ ನ್ಯಾಷನಲ್​ ಪಾರ್ಕ್​ಗೆ ತರಲಾಗಿದ್ದ ಚೀತಾ ಸಾಶಾ ಕಳೆದ ಮಾರ್ಚ್ ತಿಂಗಳಲ್ಲಿ ಸಾವನ್ನಪ್ಪಿತ್ತು. ಕಳೆದ 3 ತಿಂಗಳಿಂದ ಈ ಚೀತಾ ಅನಾರೋಗ್ಯದಿಂದ ಬಳಲುತ್ತಿದ್ದು ಅದರ ಸಾವಿಗೆ ಕಿಡ್ನಿ ಸೋಂಕು ಕಾರಣ ಎಂದು ತಿಳಿದುಬಂದಿತ್ತು. ಆದ್ರೆ ಉದಯ್ ಚೀತಾ ಸಾವಿಗೆ ಮರಣೋತ್ತರ ಪರೀಕ್ಷೆ ವರದಿ ಬಳಿಕ ಕಾರಣ ತಿಳಿಯಲಿದೆ.

ಈ ವರ್ಷ ಫೆಬ್ರವರಿ 18 ರಂದು ಇತರ 11 ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಕುನೊಗೆ ಕರೆತರಲಾಗಿತು. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಇದು ಎರಡನೇ ಚೀತಾ ಸಾವಾಗಿದೆ. ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಇಪ್ಪತ್ತು ಚೀತಾಗಳನ್ನು ತರಲಾಗಿತು. ಕಳೆದ ವರ್ಷ ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಪರಿಚಯಿಸಲಾದ ಎಂಟು ಚೀತಾಗಳಲ್ಲಿ ಒಂದಾದ ಸಾಶಾ ಮಾರ್ಚ್‌ನಲ್ಲಿ ಮೃತಪಟ್ಟಿತ್ತು. ಭಾನುವಾರ ಎರಡನೇ ಚೀತಾ ಸಾವಿನೊಂದಿಗೆ, ಈಗ ಚೀತಾಗಳ ಸಂಖ್ಯೆ 18 ಕ್ಕೆ ಇಳಿದಿದೆ.

lokesh

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

19 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

19 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

19 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago