BREAKING NEWS

ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ : ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ

ಅಟ್ಲಾಂಟಿಕ್ ಸಾಗರ : ಟೈಟಾನಿಕ್ ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ. ಟೈಟಾನಿಕ್ ಸಬ್​ಮೆರಿನ್ ಕಣ್ಮರೆಯಾಗಿರುವುದನ್ನು ಸ್ಕೈ ನ್ಯೂಸ್ ದೃಢಪಡಿಸಿದೆ. ನಾಪತ್ತೆಯಾಗಿರುವ ಜಲಾಂತರ್ಗಾಮಿ ನೌಕೆಯಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ದೃಢಪಟ್ಟಿಲ್ಲ.

ಏಪ್ರಿಲ್ 14, 1912 ರಂದು ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ದೊಡ್ಡ ಮಂಜುಗಡ್ಡೆಗೆ (ಐಸ್ ರಾಕ್) ಡಿಕ್ಕಿ ಹೊಡೆದ ನಂತರ ಟೈಟಾನಿಕ್ ಹಡಗು ಎರಡು ತುಂಡಾಗಿ ಸಮುದ್ರದಲ್ಲಿ ಮುಳುಗಿತ್ತು. ಆ ಸಮಯದಲ್ಲಿ, ಟೈಟಾನಿಕ್ ಮುಳುಗುವಿಕೆಯಿಂದ 1500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಏಪ್ರಿಲ್ 10 ರಂದು, ಈ ಹಡಗು ಬ್ರಿಟನ್‌ನ ಸೌತಾಂಪ್ಟನ್ ಬಂದರಿನಿಂದ ನ್ಯೂಯಾರ್ಕ್‌ಗೆ ಪ್ರಯಾಣ ಬೆಳೆಸಿತ್ತು, ಅದು ಅಪಘಾತಕ್ಕೆ ಬಲಿಯಾಯಿತು.

ಹಾಲಿವುಡ್‌ನ ಖ್ಯಾತ ಚಲನಚಿತ್ರ ನಿರ್ಮಾಪಕ ಜೇಮ್ಸ್ ಕ್ಯಾಮರೂನ್ ಕೂಡ ಟೈಟಾನಿಕ್ ಹಡಗು ದುರಂತದ ಬಗ್ಗೆ ಅದೇ ಹೆಸರಿನಲ್ಲಿ ಚಲನಚಿತ್ರವನ್ನು ನಿರ್ಮಿಸಿದ್ದಾರೆ. ಇದರಲ್ಲಿ ಟೈಟಾನಿಕ್ ಅಪಘಾತವನ್ನು ಬಹಳ ಹತ್ತಿರದಿಂದ ತೋರಿಸಲಾಗಿದೆ. ಈ ಚಿತ್ರ ವಿಶ್ವಾದ್ಯಂತ ಪ್ರಶಂಸೆಗೆ ಪಾತ್ರವಾಯಿತು.

ನೌಕೆಯಲ್ಲಿದ್ದವರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆದರೆ ಎಷ್ಟು ಮಂದಿ ಇದ್ದರು ಎನ್ನುವ ಕುರಿತು ನಿಖರವಾದ ಮಾಹಿತಿ ಇಲ್ಲ ಎಂದು ಓಸಿಂಗೇಟ್ ಕಂಪನಿ ಹೇಳಿದೆ.

ಸಮುದ್ರಯಾನವು ನ್ಯೂಫೌಂಡ್​ಲ್ಯಾಂಡ್​ನ ಸೇಂಟ್​ ಜಾನ್ಸ್​ನಲ್ಲಿ ಪ್ರಾರಂಭವಾಗುತ್ತದೆ. ಅಟ್ಲಾಂಟಿಕ್​ನಾದ್ಯಂತ ಸುಮಾರು 400 ಮೈಲಿಗಳಷ್ಟು ಸಂಚರಿಸುತ್ತದೆ. ಐವರು ಮಾತ್ರ ಈ ನೌಕೆಯನ್ನು ಒಂದೇ ಸಮಯದಲ್ಲಿ ಹತ್ತಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ.

lokesh

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

7 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

8 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

8 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

8 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

9 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

9 hours ago