BREAKING NEWS

ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ : ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ

ಅಟ್ಲಾಂಟಿಕ್ ಸಾಗರ : ಟೈಟಾನಿಕ್ ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ. ಟೈಟಾನಿಕ್ ಸಬ್​ಮೆರಿನ್ ಕಣ್ಮರೆಯಾಗಿರುವುದನ್ನು ಸ್ಕೈ ನ್ಯೂಸ್ ದೃಢಪಡಿಸಿದೆ. ನಾಪತ್ತೆಯಾಗಿರುವ ಜಲಾಂತರ್ಗಾಮಿ ನೌಕೆಯಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ದೃಢಪಟ್ಟಿಲ್ಲ.

ಏಪ್ರಿಲ್ 14, 1912 ರಂದು ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ದೊಡ್ಡ ಮಂಜುಗಡ್ಡೆಗೆ (ಐಸ್ ರಾಕ್) ಡಿಕ್ಕಿ ಹೊಡೆದ ನಂತರ ಟೈಟಾನಿಕ್ ಹಡಗು ಎರಡು ತುಂಡಾಗಿ ಸಮುದ್ರದಲ್ಲಿ ಮುಳುಗಿತ್ತು. ಆ ಸಮಯದಲ್ಲಿ, ಟೈಟಾನಿಕ್ ಮುಳುಗುವಿಕೆಯಿಂದ 1500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಏಪ್ರಿಲ್ 10 ರಂದು, ಈ ಹಡಗು ಬ್ರಿಟನ್‌ನ ಸೌತಾಂಪ್ಟನ್ ಬಂದರಿನಿಂದ ನ್ಯೂಯಾರ್ಕ್‌ಗೆ ಪ್ರಯಾಣ ಬೆಳೆಸಿತ್ತು, ಅದು ಅಪಘಾತಕ್ಕೆ ಬಲಿಯಾಯಿತು.

ಹಾಲಿವುಡ್‌ನ ಖ್ಯಾತ ಚಲನಚಿತ್ರ ನಿರ್ಮಾಪಕ ಜೇಮ್ಸ್ ಕ್ಯಾಮರೂನ್ ಕೂಡ ಟೈಟಾನಿಕ್ ಹಡಗು ದುರಂತದ ಬಗ್ಗೆ ಅದೇ ಹೆಸರಿನಲ್ಲಿ ಚಲನಚಿತ್ರವನ್ನು ನಿರ್ಮಿಸಿದ್ದಾರೆ. ಇದರಲ್ಲಿ ಟೈಟಾನಿಕ್ ಅಪಘಾತವನ್ನು ಬಹಳ ಹತ್ತಿರದಿಂದ ತೋರಿಸಲಾಗಿದೆ. ಈ ಚಿತ್ರ ವಿಶ್ವಾದ್ಯಂತ ಪ್ರಶಂಸೆಗೆ ಪಾತ್ರವಾಯಿತು.

ನೌಕೆಯಲ್ಲಿದ್ದವರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆದರೆ ಎಷ್ಟು ಮಂದಿ ಇದ್ದರು ಎನ್ನುವ ಕುರಿತು ನಿಖರವಾದ ಮಾಹಿತಿ ಇಲ್ಲ ಎಂದು ಓಸಿಂಗೇಟ್ ಕಂಪನಿ ಹೇಳಿದೆ.

ಸಮುದ್ರಯಾನವು ನ್ಯೂಫೌಂಡ್​ಲ್ಯಾಂಡ್​ನ ಸೇಂಟ್​ ಜಾನ್ಸ್​ನಲ್ಲಿ ಪ್ರಾರಂಭವಾಗುತ್ತದೆ. ಅಟ್ಲಾಂಟಿಕ್​ನಾದ್ಯಂತ ಸುಮಾರು 400 ಮೈಲಿಗಳಷ್ಟು ಸಂಚರಿಸುತ್ತದೆ. ಐವರು ಮಾತ್ರ ಈ ನೌಕೆಯನ್ನು ಒಂದೇ ಸಮಯದಲ್ಲಿ ಹತ್ತಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago