ಅಟ್ಲಾಂಟಿಕ್ ಸಾಗರ : ಟೈಟಾನಿಕ್ ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ. ಟೈಟಾನಿಕ್ ಸಬ್ಮೆರಿನ್ ಕಣ್ಮರೆಯಾಗಿರುವುದನ್ನು ಸ್ಕೈ ನ್ಯೂಸ್ ದೃಢಪಡಿಸಿದೆ. ನಾಪತ್ತೆಯಾಗಿರುವ ಜಲಾಂತರ್ಗಾಮಿ ನೌಕೆಯಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ದೃಢಪಟ್ಟಿಲ್ಲ.
ಏಪ್ರಿಲ್ 14, 1912 ರಂದು ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ದೊಡ್ಡ ಮಂಜುಗಡ್ಡೆಗೆ (ಐಸ್ ರಾಕ್) ಡಿಕ್ಕಿ ಹೊಡೆದ ನಂತರ ಟೈಟಾನಿಕ್ ಹಡಗು ಎರಡು ತುಂಡಾಗಿ ಸಮುದ್ರದಲ್ಲಿ ಮುಳುಗಿತ್ತು. ಆ ಸಮಯದಲ್ಲಿ, ಟೈಟಾನಿಕ್ ಮುಳುಗುವಿಕೆಯಿಂದ 1500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಏಪ್ರಿಲ್ 10 ರಂದು, ಈ ಹಡಗು ಬ್ರಿಟನ್ನ ಸೌತಾಂಪ್ಟನ್ ಬಂದರಿನಿಂದ ನ್ಯೂಯಾರ್ಕ್ಗೆ ಪ್ರಯಾಣ ಬೆಳೆಸಿತ್ತು, ಅದು ಅಪಘಾತಕ್ಕೆ ಬಲಿಯಾಯಿತು.
ಹಾಲಿವುಡ್ನ ಖ್ಯಾತ ಚಲನಚಿತ್ರ ನಿರ್ಮಾಪಕ ಜೇಮ್ಸ್ ಕ್ಯಾಮರೂನ್ ಕೂಡ ಟೈಟಾನಿಕ್ ಹಡಗು ದುರಂತದ ಬಗ್ಗೆ ಅದೇ ಹೆಸರಿನಲ್ಲಿ ಚಲನಚಿತ್ರವನ್ನು ನಿರ್ಮಿಸಿದ್ದಾರೆ. ಇದರಲ್ಲಿ ಟೈಟಾನಿಕ್ ಅಪಘಾತವನ್ನು ಬಹಳ ಹತ್ತಿರದಿಂದ ತೋರಿಸಲಾಗಿದೆ. ಈ ಚಿತ್ರ ವಿಶ್ವಾದ್ಯಂತ ಪ್ರಶಂಸೆಗೆ ಪಾತ್ರವಾಯಿತು.
ನೌಕೆಯಲ್ಲಿದ್ದವರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆದರೆ ಎಷ್ಟು ಮಂದಿ ಇದ್ದರು ಎನ್ನುವ ಕುರಿತು ನಿಖರವಾದ ಮಾಹಿತಿ ಇಲ್ಲ ಎಂದು ಓಸಿಂಗೇಟ್ ಕಂಪನಿ ಹೇಳಿದೆ.
ಸಮುದ್ರಯಾನವು ನ್ಯೂಫೌಂಡ್ಲ್ಯಾಂಡ್ನ ಸೇಂಟ್ ಜಾನ್ಸ್ನಲ್ಲಿ ಪ್ರಾರಂಭವಾಗುತ್ತದೆ. ಅಟ್ಲಾಂಟಿಕ್ನಾದ್ಯಂತ ಸುಮಾರು 400 ಮೈಲಿಗಳಷ್ಟು ಸಂಚರಿಸುತ್ತದೆ. ಐವರು ಮಾತ್ರ ಈ ನೌಕೆಯನ್ನು ಒಂದೇ ಸಮಯದಲ್ಲಿ ಹತ್ತಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…