BREAKING NEWS

ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ : ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ

ಅಟ್ಲಾಂಟಿಕ್ ಸಾಗರ : ಟೈಟಾನಿಕ್ ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ. ಟೈಟಾನಿಕ್ ಸಬ್​ಮೆರಿನ್ ಕಣ್ಮರೆಯಾಗಿರುವುದನ್ನು ಸ್ಕೈ ನ್ಯೂಸ್ ದೃಢಪಡಿಸಿದೆ. ನಾಪತ್ತೆಯಾಗಿರುವ ಜಲಾಂತರ್ಗಾಮಿ ನೌಕೆಯಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ದೃಢಪಟ್ಟಿಲ್ಲ.

ಏಪ್ರಿಲ್ 14, 1912 ರಂದು ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ದೊಡ್ಡ ಮಂಜುಗಡ್ಡೆಗೆ (ಐಸ್ ರಾಕ್) ಡಿಕ್ಕಿ ಹೊಡೆದ ನಂತರ ಟೈಟಾನಿಕ್ ಹಡಗು ಎರಡು ತುಂಡಾಗಿ ಸಮುದ್ರದಲ್ಲಿ ಮುಳುಗಿತ್ತು. ಆ ಸಮಯದಲ್ಲಿ, ಟೈಟಾನಿಕ್ ಮುಳುಗುವಿಕೆಯಿಂದ 1500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಏಪ್ರಿಲ್ 10 ರಂದು, ಈ ಹಡಗು ಬ್ರಿಟನ್‌ನ ಸೌತಾಂಪ್ಟನ್ ಬಂದರಿನಿಂದ ನ್ಯೂಯಾರ್ಕ್‌ಗೆ ಪ್ರಯಾಣ ಬೆಳೆಸಿತ್ತು, ಅದು ಅಪಘಾತಕ್ಕೆ ಬಲಿಯಾಯಿತು.

ಹಾಲಿವುಡ್‌ನ ಖ್ಯಾತ ಚಲನಚಿತ್ರ ನಿರ್ಮಾಪಕ ಜೇಮ್ಸ್ ಕ್ಯಾಮರೂನ್ ಕೂಡ ಟೈಟಾನಿಕ್ ಹಡಗು ದುರಂತದ ಬಗ್ಗೆ ಅದೇ ಹೆಸರಿನಲ್ಲಿ ಚಲನಚಿತ್ರವನ್ನು ನಿರ್ಮಿಸಿದ್ದಾರೆ. ಇದರಲ್ಲಿ ಟೈಟಾನಿಕ್ ಅಪಘಾತವನ್ನು ಬಹಳ ಹತ್ತಿರದಿಂದ ತೋರಿಸಲಾಗಿದೆ. ಈ ಚಿತ್ರ ವಿಶ್ವಾದ್ಯಂತ ಪ್ರಶಂಸೆಗೆ ಪಾತ್ರವಾಯಿತು.

ನೌಕೆಯಲ್ಲಿದ್ದವರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆದರೆ ಎಷ್ಟು ಮಂದಿ ಇದ್ದರು ಎನ್ನುವ ಕುರಿತು ನಿಖರವಾದ ಮಾಹಿತಿ ಇಲ್ಲ ಎಂದು ಓಸಿಂಗೇಟ್ ಕಂಪನಿ ಹೇಳಿದೆ.

ಸಮುದ್ರಯಾನವು ನ್ಯೂಫೌಂಡ್​ಲ್ಯಾಂಡ್​ನ ಸೇಂಟ್​ ಜಾನ್ಸ್​ನಲ್ಲಿ ಪ್ರಾರಂಭವಾಗುತ್ತದೆ. ಅಟ್ಲಾಂಟಿಕ್​ನಾದ್ಯಂತ ಸುಮಾರು 400 ಮೈಲಿಗಳಷ್ಟು ಸಂಚರಿಸುತ್ತದೆ. ಐವರು ಮಾತ್ರ ಈ ನೌಕೆಯನ್ನು ಒಂದೇ ಸಮಯದಲ್ಲಿ ಹತ್ತಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ.

lokesh

Recent Posts

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

18 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

58 mins ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago