BREAKING NEWS

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿದ ಖಾಸಗಿ ಬಸ್​ಗಳು!

ಬೆಂಗಳೂರು: ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ಬೆಂಕಿ ವರ್ಕ್​​ಶಾಪ್​ ನಲ್ಲಿರೋ ಇತರೆ ವಾಹನಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಪ್ರಾಣ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ.

ಖಾಸಗಿ ಬಸ್​ಗಳನ್ನು ನಿಲ್ಲಿಸಿದ್ದ ಜಾಗ ಇದಾಗಿತ್ತು. ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಒಳಗೆ 10 ಬಸ್ ಗಳನ್ನು ನಿಲ್ಲಿಸಲಾಗಿದೆ. ಇವು ಬೇರೆ ಬೇರೆ ಸಂಸ್ಥೆಗಳಿಗೆ ಸೇರಿರುವ ಬಸ್ ಗಳಾಗಿವೆ.

ಈ ಪೈಕಿ ಸದ್ಯ ಆರು ಬಸ್ ಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವರ್ಕ್​ಶಾಪ್​ ನಿಂದ ಜನರನ್ನು ದೂರ ಕಳುಹಿಸಲಾಗುತ್ತಿದೆ.
andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago