ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತವೊಂದು ನಡೆದಿದೆ.
ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಈ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿ ಮೂವರು ಭದ್ರತಾ ಸಿಬ್ಬಂದಿಗಳನ್ನು ರಕ್ಷಿಸಿದ್ದಾರೆ.ಆದರೆ ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದೊಳಗಿದ್ದ ವಸ್ತುಗಳು ಭಾಗಶಃ ಸುಟ್ಟುಹೋಗಿವೆ.
ಬೆಂಕಿ ಹೊತ್ತಿಕೊಂಡಿದ್ದ ಬಹುಮಹಡಿ ಕಟ್ಟಡದಲ್ಲಿ ಫರ್ನಿಚರ್ ಶಾಪ್,ಕೋಚಿಂಗ್ ಸೆಂಟರ್ ಹಾಗೂ ಐಟಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿದ್ದವು.
ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಕೂಡ ನಿಖರ ಕಾರಣ ತಿಳಿದು ಬಂದಿಲ್ಲ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…