BREAKING NEWS

ಸೆಲ್ಫ್ ಕಿಡ್ನಾಪ್ ಪ್ರಕರಣದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮತ್ತೊಂದು ವಂಚನೆ ಬೆಳಕಿಗೆ?

ಯಲಹಂಕ : ಸೆಲ್ಫ್ ಕಿಡ್ನಾಪ್ ನಾಟಕವಾಡಿದ್ದರು ಎನ್ನಲಾಗಿದ್ದ ಜೆಡಿಎಸ್ ಮುಖಂಡ ಮುನೇಗೌಡರ ಮೇಲೆ ವಂಚನೆ ಆರೋಪ ಬಿದ್ದಿದೆ ಯಲಹಂಕದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮೇಲೆ ಲಕ್ಷಾಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು ಭಾರಿ ವಾಹನಗಳನ್ನು ಮುನೇಗೌಡ ಬಾಡಿಗೆಗೆ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ.

ಲಾಜಿಸ್ಟಿಕ್ಸ್ ಸರ್ವೀಸ್ ನಡೆಸುತ್ತಿರುವ ಜೆಡಿಎಸ್ ಅಭ್ಯರ್ಥಿ ಮುನೇಗೌಡ, ಆನೇಕಲ್ ಮಂಜುನಾಥರ ಸುಮುಖ ಎಂಟರ್ ಪ್ರೈಸಸ್ ಮೂಲಕ ಭಾರಿ ವಾಹನ ಬಾಡಿಗೆ ಪಡೆದಿದ್ದರು. ಮುನೇಗೌಡರ ಎಸ್.ವಿ.ಸಿ ರೋಡ್ ಲೈನ್ಸ್ ಸಂಸ್ಥೆಗೆ ಭಾರಿ ವಾಹನ ಗುತ್ತಿಗೆಗೆ ನೀಡಲಾಗಿತ್ತು. ಈ ಹಿನ್ನೆಲೆಯೆಲ್ಲಿ 2020 ಡಿಸೆಂಬರ್ ನಿಂದ 2021ರವರೆಗೆ ಮಂಜುನಾಥ್ ಭಾರಿ ವಾಹನಗಳನ್ನು ಬಾಡಿಗೆಗೆ ಕಳುಹಿಸಿದ್ದರು ಎನ್ನಲಾಗಿದೆ. ಬಾಡಿಗೆಗೆ ಎಂದು ನೀಡಿದ್ದ ವಾಹನಕ್ಕೆ ಮಾಲೀಕ ಮಂಜುನಾಥ್, ಚಾಲಕರ ಸಂಬಳ‌ ಡಿಸೇಲ್‌ ಹಾಕಿಸಿ ವ್ಯವಹಾರ ನಡೆಸಿದ್ದರು. ಆದರೆ ವ್ಯವಹಾರದ 69ಲಕ್ಷ ಬಾಕಿ ಹಣ ಕೊಡದೇ ಮುನೇಗೌಡ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನೊಂದ ವಾಹನ ಮಾಲೀಕ, ಜೆಡಿಎಸ್ ಅಭ್ಯರ್ಥಿ ಮುನೇಗೌಡರಿಗೆ ಕರೆ ಮಾಡಿ “ನನ್ನ ಹಣ ಕೊಡಿ, ಇಲ್ಲಾಂದ್ರೆ ಸಾಯಬೇಕಾದ ಸ್ಥಿತಿ ಇದೆ” ಎಂದು ಮಂಜುನಾಥ್ ಹೇಳಿದಾಗ ಅವಾಚ್ಯವಾಗಿ ನಿಂದಿಸಿ ಧಮ್ಕಿ ಹಾಕಿದ್ದಾರೆ. “ನಾನು ಹಣ ಕೊಡೋದಿಲ್ಲ” ಎಂದು ಅವಾಶ್ಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದೂ ಅಲ್ಲದೇ ಆಡಿಯೋದಲ್ಲಿ “ಬೇಕಾದ್ರೆ ಸಾಯಿ” ಎಂದು ಜೆಡಿಎಸ್ ಅಭ್ಯರ್ಥಿ ಮುನೇಗೌಡ ಹೇಳಿರುವುದೂ ಕೇಳಿ ಬಂದಿದೆ.
ಇಷ್ಟೆಲ್ಲಾ ಆದ ಮೇಲೆ ನೊಂದ ಮಂಜುನಾಥ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಬೆಂಗಳೂರು ಗ್ರಾಮಾಂತರ ಎಸ್.ಪಿ.ಗೆ, ಕೇಂದ್ರ ವಲಯ ಐಜಿಪಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ನ್ಯಾಯಕ್ಕಾಗಿ ವಂಚನೆಗೊಳಗಾದ ಮಂಜುನಾಥ್ ಆಗ್ರಹಿಸಿದ್ದರು. ಇನ್ನು ಇದೇ ಜೆಡಿಎಸ್ ಅಭ್ಯರ್ಥಿ ಮೊನ್ನೆ ಕಿಡ್ನಾಪ್ ನಾಟಕವಾಡಿ, ಶಾಸಕ ಎಸ್.ಆರ್ ವಿಶ್ವನಾಥ್ ಮೇಲೆ ಆ ಆರೋಪವನ್ನು ಹಾಕಿ ಚುನಾವಣೆ ಗೆಲ್ಲಲು ಷಡ್ಯಂತ್ರ ಮಾಡಿದ್ದ ಆರೋಪ ಕೂಡ ಮೈಮೇಲೆ ಎಳೆದುಕೊಂಡಿದ್ದರು. ಇದೀಗ ವಂಚನೆ ಮಾಡಿ ಧಮ್ಕಿ ಹಾಕಿರುವ ಮುನೇಗೌಡರ ಆಡಿಯೋ ವೈರಲ್ ಆಗಿದೆ ಎನ್ನಲಾಗಿದೆ.

lokesh

Recent Posts

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

19 mins ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

28 mins ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

38 mins ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…

42 mins ago

ದಿಲ್ಲಿಯಲ್ಲಿ ಅಟಲ್‌ ಕ್ಯಾಂಟಿನ್‌ ಆರಂಭ : ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ 5 ರೂ.ಗೆ ಊಟ

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…

52 mins ago

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

1 hour ago