BREAKING NEWS

ಸೆಲ್ಫ್ ಕಿಡ್ನಾಪ್ ಪ್ರಕರಣದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮತ್ತೊಂದು ವಂಚನೆ ಬೆಳಕಿಗೆ?

ಯಲಹಂಕ : ಸೆಲ್ಫ್ ಕಿಡ್ನಾಪ್ ನಾಟಕವಾಡಿದ್ದರು ಎನ್ನಲಾಗಿದ್ದ ಜೆಡಿಎಸ್ ಮುಖಂಡ ಮುನೇಗೌಡರ ಮೇಲೆ ವಂಚನೆ ಆರೋಪ ಬಿದ್ದಿದೆ ಯಲಹಂಕದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮೇಲೆ ಲಕ್ಷಾಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು ಭಾರಿ ವಾಹನಗಳನ್ನು ಮುನೇಗೌಡ ಬಾಡಿಗೆಗೆ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ.

ಲಾಜಿಸ್ಟಿಕ್ಸ್ ಸರ್ವೀಸ್ ನಡೆಸುತ್ತಿರುವ ಜೆಡಿಎಸ್ ಅಭ್ಯರ್ಥಿ ಮುನೇಗೌಡ, ಆನೇಕಲ್ ಮಂಜುನಾಥರ ಸುಮುಖ ಎಂಟರ್ ಪ್ರೈಸಸ್ ಮೂಲಕ ಭಾರಿ ವಾಹನ ಬಾಡಿಗೆ ಪಡೆದಿದ್ದರು. ಮುನೇಗೌಡರ ಎಸ್.ವಿ.ಸಿ ರೋಡ್ ಲೈನ್ಸ್ ಸಂಸ್ಥೆಗೆ ಭಾರಿ ವಾಹನ ಗುತ್ತಿಗೆಗೆ ನೀಡಲಾಗಿತ್ತು. ಈ ಹಿನ್ನೆಲೆಯೆಲ್ಲಿ 2020 ಡಿಸೆಂಬರ್ ನಿಂದ 2021ರವರೆಗೆ ಮಂಜುನಾಥ್ ಭಾರಿ ವಾಹನಗಳನ್ನು ಬಾಡಿಗೆಗೆ ಕಳುಹಿಸಿದ್ದರು ಎನ್ನಲಾಗಿದೆ. ಬಾಡಿಗೆಗೆ ಎಂದು ನೀಡಿದ್ದ ವಾಹನಕ್ಕೆ ಮಾಲೀಕ ಮಂಜುನಾಥ್, ಚಾಲಕರ ಸಂಬಳ‌ ಡಿಸೇಲ್‌ ಹಾಕಿಸಿ ವ್ಯವಹಾರ ನಡೆಸಿದ್ದರು. ಆದರೆ ವ್ಯವಹಾರದ 69ಲಕ್ಷ ಬಾಕಿ ಹಣ ಕೊಡದೇ ಮುನೇಗೌಡ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನೊಂದ ವಾಹನ ಮಾಲೀಕ, ಜೆಡಿಎಸ್ ಅಭ್ಯರ್ಥಿ ಮುನೇಗೌಡರಿಗೆ ಕರೆ ಮಾಡಿ “ನನ್ನ ಹಣ ಕೊಡಿ, ಇಲ್ಲಾಂದ್ರೆ ಸಾಯಬೇಕಾದ ಸ್ಥಿತಿ ಇದೆ” ಎಂದು ಮಂಜುನಾಥ್ ಹೇಳಿದಾಗ ಅವಾಚ್ಯವಾಗಿ ನಿಂದಿಸಿ ಧಮ್ಕಿ ಹಾಕಿದ್ದಾರೆ. “ನಾನು ಹಣ ಕೊಡೋದಿಲ್ಲ” ಎಂದು ಅವಾಶ್ಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದೂ ಅಲ್ಲದೇ ಆಡಿಯೋದಲ್ಲಿ “ಬೇಕಾದ್ರೆ ಸಾಯಿ” ಎಂದು ಜೆಡಿಎಸ್ ಅಭ್ಯರ್ಥಿ ಮುನೇಗೌಡ ಹೇಳಿರುವುದೂ ಕೇಳಿ ಬಂದಿದೆ.
ಇಷ್ಟೆಲ್ಲಾ ಆದ ಮೇಲೆ ನೊಂದ ಮಂಜುನಾಥ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಬೆಂಗಳೂರು ಗ್ರಾಮಾಂತರ ಎಸ್.ಪಿ.ಗೆ, ಕೇಂದ್ರ ವಲಯ ಐಜಿಪಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ನ್ಯಾಯಕ್ಕಾಗಿ ವಂಚನೆಗೊಳಗಾದ ಮಂಜುನಾಥ್ ಆಗ್ರಹಿಸಿದ್ದರು. ಇನ್ನು ಇದೇ ಜೆಡಿಎಸ್ ಅಭ್ಯರ್ಥಿ ಮೊನ್ನೆ ಕಿಡ್ನಾಪ್ ನಾಟಕವಾಡಿ, ಶಾಸಕ ಎಸ್.ಆರ್ ವಿಶ್ವನಾಥ್ ಮೇಲೆ ಆ ಆರೋಪವನ್ನು ಹಾಕಿ ಚುನಾವಣೆ ಗೆಲ್ಲಲು ಷಡ್ಯಂತ್ರ ಮಾಡಿದ್ದ ಆರೋಪ ಕೂಡ ಮೈಮೇಲೆ ಎಳೆದುಕೊಂಡಿದ್ದರು. ಇದೀಗ ವಂಚನೆ ಮಾಡಿ ಧಮ್ಕಿ ಹಾಕಿರುವ ಮುನೇಗೌಡರ ಆಡಿಯೋ ವೈರಲ್ ಆಗಿದೆ ಎನ್ನಲಾಗಿದೆ.

lokesh

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

9 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

27 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

50 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago