ಯಲಹಂಕ : ಸೆಲ್ಫ್ ಕಿಡ್ನಾಪ್ ನಾಟಕವಾಡಿದ್ದರು ಎನ್ನಲಾಗಿದ್ದ ಜೆಡಿಎಸ್ ಮುಖಂಡ ಮುನೇಗೌಡರ ಮೇಲೆ ವಂಚನೆ ಆರೋಪ ಬಿದ್ದಿದೆ ಯಲಹಂಕದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮೇಲೆ ಲಕ್ಷಾಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು ಭಾರಿ ವಾಹನಗಳನ್ನು ಮುನೇಗೌಡ ಬಾಡಿಗೆಗೆ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ.
ಲಾಜಿಸ್ಟಿಕ್ಸ್ ಸರ್ವೀಸ್ ನಡೆಸುತ್ತಿರುವ ಜೆಡಿಎಸ್ ಅಭ್ಯರ್ಥಿ ಮುನೇಗೌಡ, ಆನೇಕಲ್ ಮಂಜುನಾಥರ ಸುಮುಖ ಎಂಟರ್ ಪ್ರೈಸಸ್ ಮೂಲಕ ಭಾರಿ ವಾಹನ ಬಾಡಿಗೆ ಪಡೆದಿದ್ದರು. ಮುನೇಗೌಡರ ಎಸ್.ವಿ.ಸಿ ರೋಡ್ ಲೈನ್ಸ್ ಸಂಸ್ಥೆಗೆ ಭಾರಿ ವಾಹನ ಗುತ್ತಿಗೆಗೆ ನೀಡಲಾಗಿತ್ತು. ಈ ಹಿನ್ನೆಲೆಯೆಲ್ಲಿ 2020 ಡಿಸೆಂಬರ್ ನಿಂದ 2021ರವರೆಗೆ ಮಂಜುನಾಥ್ ಭಾರಿ ವಾಹನಗಳನ್ನು ಬಾಡಿಗೆಗೆ ಕಳುಹಿಸಿದ್ದರು ಎನ್ನಲಾಗಿದೆ. ಬಾಡಿಗೆಗೆ ಎಂದು ನೀಡಿದ್ದ ವಾಹನಕ್ಕೆ ಮಾಲೀಕ ಮಂಜುನಾಥ್, ಚಾಲಕರ ಸಂಬಳ ಡಿಸೇಲ್ ಹಾಕಿಸಿ ವ್ಯವಹಾರ ನಡೆಸಿದ್ದರು. ಆದರೆ ವ್ಯವಹಾರದ 69ಲಕ್ಷ ಬಾಕಿ ಹಣ ಕೊಡದೇ ಮುನೇಗೌಡ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನೊಂದ ವಾಹನ ಮಾಲೀಕ, ಜೆಡಿಎಸ್ ಅಭ್ಯರ್ಥಿ ಮುನೇಗೌಡರಿಗೆ ಕರೆ ಮಾಡಿ “ನನ್ನ ಹಣ ಕೊಡಿ, ಇಲ್ಲಾಂದ್ರೆ ಸಾಯಬೇಕಾದ ಸ್ಥಿತಿ ಇದೆ” ಎಂದು ಮಂಜುನಾಥ್ ಹೇಳಿದಾಗ ಅವಾಚ್ಯವಾಗಿ ನಿಂದಿಸಿ ಧಮ್ಕಿ ಹಾಕಿದ್ದಾರೆ. “ನಾನು ಹಣ ಕೊಡೋದಿಲ್ಲ” ಎಂದು ಅವಾಶ್ಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದೂ ಅಲ್ಲದೇ ಆಡಿಯೋದಲ್ಲಿ “ಬೇಕಾದ್ರೆ ಸಾಯಿ” ಎಂದು ಜೆಡಿಎಸ್ ಅಭ್ಯರ್ಥಿ ಮುನೇಗೌಡ ಹೇಳಿರುವುದೂ ಕೇಳಿ ಬಂದಿದೆ.
ಇಷ್ಟೆಲ್ಲಾ ಆದ ಮೇಲೆ ನೊಂದ ಮಂಜುನಾಥ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಬೆಂಗಳೂರು ಗ್ರಾಮಾಂತರ ಎಸ್.ಪಿ.ಗೆ, ಕೇಂದ್ರ ವಲಯ ಐಜಿಪಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.
ನ್ಯಾಯಕ್ಕಾಗಿ ವಂಚನೆಗೊಳಗಾದ ಮಂಜುನಾಥ್ ಆಗ್ರಹಿಸಿದ್ದರು. ಇನ್ನು ಇದೇ ಜೆಡಿಎಸ್ ಅಭ್ಯರ್ಥಿ ಮೊನ್ನೆ ಕಿಡ್ನಾಪ್ ನಾಟಕವಾಡಿ, ಶಾಸಕ ಎಸ್.ಆರ್ ವಿಶ್ವನಾಥ್ ಮೇಲೆ ಆ ಆರೋಪವನ್ನು ಹಾಕಿ ಚುನಾವಣೆ ಗೆಲ್ಲಲು ಷಡ್ಯಂತ್ರ ಮಾಡಿದ್ದ ಆರೋಪ ಕೂಡ ಮೈಮೇಲೆ ಎಳೆದುಕೊಂಡಿದ್ದರು. ಇದೀಗ ವಂಚನೆ ಮಾಡಿ ಧಮ್ಕಿ ಹಾಕಿರುವ ಮುನೇಗೌಡರ ಆಡಿಯೋ ವೈರಲ್ ಆಗಿದೆ ಎನ್ನಲಾಗಿದೆ.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…