ಯಲಹಂಕ : ಸೆಲ್ಫ್ ಕಿಡ್ನಾಪ್ ನಾಟಕವಾಡಿದ್ದರು ಎನ್ನಲಾಗಿದ್ದ ಜೆಡಿಎಸ್ ಮುಖಂಡ ಮುನೇಗೌಡರ ಮೇಲೆ ವಂಚನೆ ಆರೋಪ ಬಿದ್ದಿದೆ ಯಲಹಂಕದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮೇಲೆ ಲಕ್ಷಾಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು ಭಾರಿ ವಾಹನಗಳನ್ನು ಮುನೇಗೌಡ ಬಾಡಿಗೆಗೆ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ.
ಲಾಜಿಸ್ಟಿಕ್ಸ್ ಸರ್ವೀಸ್ ನಡೆಸುತ್ತಿರುವ ಜೆಡಿಎಸ್ ಅಭ್ಯರ್ಥಿ ಮುನೇಗೌಡ, ಆನೇಕಲ್ ಮಂಜುನಾಥರ ಸುಮುಖ ಎಂಟರ್ ಪ್ರೈಸಸ್ ಮೂಲಕ ಭಾರಿ ವಾಹನ ಬಾಡಿಗೆ ಪಡೆದಿದ್ದರು. ಮುನೇಗೌಡರ ಎಸ್.ವಿ.ಸಿ ರೋಡ್ ಲೈನ್ಸ್ ಸಂಸ್ಥೆಗೆ ಭಾರಿ ವಾಹನ ಗುತ್ತಿಗೆಗೆ ನೀಡಲಾಗಿತ್ತು. ಈ ಹಿನ್ನೆಲೆಯೆಲ್ಲಿ 2020 ಡಿಸೆಂಬರ್ ನಿಂದ 2021ರವರೆಗೆ ಮಂಜುನಾಥ್ ಭಾರಿ ವಾಹನಗಳನ್ನು ಬಾಡಿಗೆಗೆ ಕಳುಹಿಸಿದ್ದರು ಎನ್ನಲಾಗಿದೆ. ಬಾಡಿಗೆಗೆ ಎಂದು ನೀಡಿದ್ದ ವಾಹನಕ್ಕೆ ಮಾಲೀಕ ಮಂಜುನಾಥ್, ಚಾಲಕರ ಸಂಬಳ ಡಿಸೇಲ್ ಹಾಕಿಸಿ ವ್ಯವಹಾರ ನಡೆಸಿದ್ದರು. ಆದರೆ ವ್ಯವಹಾರದ 69ಲಕ್ಷ ಬಾಕಿ ಹಣ ಕೊಡದೇ ಮುನೇಗೌಡ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನೊಂದ ವಾಹನ ಮಾಲೀಕ, ಜೆಡಿಎಸ್ ಅಭ್ಯರ್ಥಿ ಮುನೇಗೌಡರಿಗೆ ಕರೆ ಮಾಡಿ “ನನ್ನ ಹಣ ಕೊಡಿ, ಇಲ್ಲಾಂದ್ರೆ ಸಾಯಬೇಕಾದ ಸ್ಥಿತಿ ಇದೆ” ಎಂದು ಮಂಜುನಾಥ್ ಹೇಳಿದಾಗ ಅವಾಚ್ಯವಾಗಿ ನಿಂದಿಸಿ ಧಮ್ಕಿ ಹಾಕಿದ್ದಾರೆ. “ನಾನು ಹಣ ಕೊಡೋದಿಲ್ಲ” ಎಂದು ಅವಾಶ್ಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದೂ ಅಲ್ಲದೇ ಆಡಿಯೋದಲ್ಲಿ “ಬೇಕಾದ್ರೆ ಸಾಯಿ” ಎಂದು ಜೆಡಿಎಸ್ ಅಭ್ಯರ್ಥಿ ಮುನೇಗೌಡ ಹೇಳಿರುವುದೂ ಕೇಳಿ ಬಂದಿದೆ.
ಇಷ್ಟೆಲ್ಲಾ ಆದ ಮೇಲೆ ನೊಂದ ಮಂಜುನಾಥ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಬೆಂಗಳೂರು ಗ್ರಾಮಾಂತರ ಎಸ್.ಪಿ.ಗೆ, ಕೇಂದ್ರ ವಲಯ ಐಜಿಪಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.
ನ್ಯಾಯಕ್ಕಾಗಿ ವಂಚನೆಗೊಳಗಾದ ಮಂಜುನಾಥ್ ಆಗ್ರಹಿಸಿದ್ದರು. ಇನ್ನು ಇದೇ ಜೆಡಿಎಸ್ ಅಭ್ಯರ್ಥಿ ಮೊನ್ನೆ ಕಿಡ್ನಾಪ್ ನಾಟಕವಾಡಿ, ಶಾಸಕ ಎಸ್.ಆರ್ ವಿಶ್ವನಾಥ್ ಮೇಲೆ ಆ ಆರೋಪವನ್ನು ಹಾಕಿ ಚುನಾವಣೆ ಗೆಲ್ಲಲು ಷಡ್ಯಂತ್ರ ಮಾಡಿದ್ದ ಆರೋಪ ಕೂಡ ಮೈಮೇಲೆ ಎಳೆದುಕೊಂಡಿದ್ದರು. ಇದೀಗ ವಂಚನೆ ಮಾಡಿ ಧಮ್ಕಿ ಹಾಕಿರುವ ಮುನೇಗೌಡರ ಆಡಿಯೋ ವೈರಲ್ ಆಗಿದೆ ಎನ್ನಲಾಗಿದೆ.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…