ಬೆಳಗಾವಿ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಏಕಾಏಕಿ ನಾಮಪತ್ರ ವಾಪಸ್ ಪಡೆದಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಗೋಕಾಕ್ನಲ್ಲೂ ಸಹ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಇದರೊಂದಿಗೆ ಜೆಡಿಎಸ್ ವರಿಷ್ಠರಿಗೆ ಶಾಕ್ ಕೊಟ್ಟಿದ್ದಾರೆ.
ಹೌದು, ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದನ್ ಗಿಡ್ಡನವರ್ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್ ಜೊತಗೆ ಕೈಜೋಡಿಸಿದ್ದಾರೆ. ಇದರೊಂದಿಗೆ ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿ ಸೋಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಒಂದಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಪಕ್ಷದ ನಾಯಕರಿಗೆ ಹೇಳದೆ ನಾಮಪತ್ರ ವಾಪಸ್ ಪಡೆದಿದ್ದಾರೆಂಬ ಟೀಕೆ ವ್ಯಕ್ತವಾಗಿದೆ.
ರಮೇಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿ ಹೋರಾಟವಿರುವ ಗೋಕಾಕ್ ರಾಜಕೀಯದಲ್ಲಿ ಹೊಸ ಬೆಳವಣಿಗೆ ನಡೆಸಿದ್ದು, ಕಾಂಗ್ರೆಸ್ಗೆ ವರದಾನವಾಗಿದೆ. ಇದರಿಂದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಗೆ ಕೊಂಚ ಸಂಕಷ್ಟ ಎದುರಾಗಿದೆ. ಯಾಕಂದ್ರೆ, ಕ್ಷೇತ್ರದ ಅಲ್ಪಸಂಖ್ಯಾತ ಮತಗಳು ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಹರಿದುಹಂಚಿ ಹೋಗಲಿದ್ದು, ಇದರಿಂದ ತಮಗೆ ಲಾಭವಾಗಲಿದೆ ಎನ್ನುವ ನಿರೀಕ್ಷೆಯಲ್ಲಿ ರಮೇಶ್ ಜಾರಕಿಹೊಳಿ ಇದ್ದರು.
ಆದರೆ, ಇದೀಗ ಜೆಡಿಎಸ್ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕೈಕೊಟ್ಟಿದ್ದು, ರಮೇಶ್ ಜಾರಕಿಹೊಳಿ ಲೆಕ್ಕಾಚಾರವೆಲ್ಲ ಉಲ್ಟಾ ಆಗಿದೆ.
ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಕೊನೆಯ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದಿರುವ ಗೋಕಾಕ್ ತಾಲೂಕು ಜೆಡಿಎಸ್ ಅಧ್ಯಕ್ಷರೂ ಆಗಿರುವ ಚಂದನ್ ಗಿಡ್ಡನವರ್, ಅವರು ಕಾಂಗ್ರೆಸ್ ಅಭ್ಯರ್ಥಿ ಡಾ.ಮಹಾಂತೇಶ ಕಡಾಡಿಗೆ ಬೆಂಬಲ ಘೋಷಿಸಿದ್ದಾರೆ. ಇದರಿಂದ ಚಂದನ್ ಗಿಡ್ಡನವರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಜಿಲ್ಲಾ ಜೆಡಿಎಸ್ ನಿರ್ಧಾರ ಮಾಡಿದೆ.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…