ಬೆಳಗಾವಿ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಏಕಾಏಕಿ ನಾಮಪತ್ರ ವಾಪಸ್ ಪಡೆದಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಗೋಕಾಕ್ನಲ್ಲೂ ಸಹ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಇದರೊಂದಿಗೆ ಜೆಡಿಎಸ್ ವರಿಷ್ಠರಿಗೆ ಶಾಕ್ ಕೊಟ್ಟಿದ್ದಾರೆ.
ಹೌದು, ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದನ್ ಗಿಡ್ಡನವರ್ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್ ಜೊತಗೆ ಕೈಜೋಡಿಸಿದ್ದಾರೆ. ಇದರೊಂದಿಗೆ ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿ ಸೋಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಒಂದಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಪಕ್ಷದ ನಾಯಕರಿಗೆ ಹೇಳದೆ ನಾಮಪತ್ರ ವಾಪಸ್ ಪಡೆದಿದ್ದಾರೆಂಬ ಟೀಕೆ ವ್ಯಕ್ತವಾಗಿದೆ.
ರಮೇಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿ ಹೋರಾಟವಿರುವ ಗೋಕಾಕ್ ರಾಜಕೀಯದಲ್ಲಿ ಹೊಸ ಬೆಳವಣಿಗೆ ನಡೆಸಿದ್ದು, ಕಾಂಗ್ರೆಸ್ಗೆ ವರದಾನವಾಗಿದೆ. ಇದರಿಂದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಗೆ ಕೊಂಚ ಸಂಕಷ್ಟ ಎದುರಾಗಿದೆ. ಯಾಕಂದ್ರೆ, ಕ್ಷೇತ್ರದ ಅಲ್ಪಸಂಖ್ಯಾತ ಮತಗಳು ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಹರಿದುಹಂಚಿ ಹೋಗಲಿದ್ದು, ಇದರಿಂದ ತಮಗೆ ಲಾಭವಾಗಲಿದೆ ಎನ್ನುವ ನಿರೀಕ್ಷೆಯಲ್ಲಿ ರಮೇಶ್ ಜಾರಕಿಹೊಳಿ ಇದ್ದರು.
ಆದರೆ, ಇದೀಗ ಜೆಡಿಎಸ್ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕೈಕೊಟ್ಟಿದ್ದು, ರಮೇಶ್ ಜಾರಕಿಹೊಳಿ ಲೆಕ್ಕಾಚಾರವೆಲ್ಲ ಉಲ್ಟಾ ಆಗಿದೆ.
ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಕೊನೆಯ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದಿರುವ ಗೋಕಾಕ್ ತಾಲೂಕು ಜೆಡಿಎಸ್ ಅಧ್ಯಕ್ಷರೂ ಆಗಿರುವ ಚಂದನ್ ಗಿಡ್ಡನವರ್, ಅವರು ಕಾಂಗ್ರೆಸ್ ಅಭ್ಯರ್ಥಿ ಡಾ.ಮಹಾಂತೇಶ ಕಡಾಡಿಗೆ ಬೆಂಬಲ ಘೋಷಿಸಿದ್ದಾರೆ. ಇದರಿಂದ ಚಂದನ್ ಗಿಡ್ಡನವರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಜಿಲ್ಲಾ ಜೆಡಿಎಸ್ ನಿರ್ಧಾರ ಮಾಡಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…