BREAKING NEWS

ತಿರುಪತಿಯಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ : ತಿರುಮಲ ತಿರುಪತಿ ಕಾಲುದಾರಿಯಲ್ಲಿ ಮತ್ತೊಂದು ಚಿರತೆಯನ್ನು ಸೆರೆಹಿಡಿಯಲಾಗಿದೆ, ನರಸಿಂಹಸ್ವಾಮಿ ದೇವಸ್ಥಾನದ ಬಳಿ 5ನೇ ಚಿರತೆ ಸೆರೆ ಹಿಡಿಯಲಾಗಿದೆ. 4 ದಿನದಿಂದ ಟ್ರ್ಯಾಪ್ ಕ್ಯಾಮರಾ ಮೂಲಕ ಚಿರತೆ ಚಲನವಲನ ಪತ್ತೆ ಮಾಡಲಾಗುತ್ತಿತ್ತು, ಸಿಬ್ಬಂದಿ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಬೋನ್ ಇಟ್ಟಿದ್ದರು, ಅರಣ್ಯ ಸಿಬ್ಬಂದಿ ಗಂಡು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಚಿರತೆ ಸಂಕುಲವನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಅಲಿಪಿರಿ ಪಾದಚಾರಿ ಮಾರ್ಗದ ಉದ್ದಕ್ಕೂ ಬೋನ್‌ಗಳನ್ನು ಬಳಸಲಾಗಿತ್ತು.

ನಾಲ್ಕು ದಿನಗಳ ಹಿಂದೆಯಷ್ಟೇ ಟ್ರ್ಯಾಪ್ ಕ್ಯಾಮೆರಾದಲ್ಲಿ ಚಿರತೆಯ ಇರುವಿಕೆಯನ್ನು ಪತ್ತೆಹಚ್ಚಲಾಗಿತ್ತು. ಇದಕ್ಕೆ ಸ್ಪಂದಿಸಿದ ತಿರುಮಲ ತಿರುಪತಿ ದೇವಸ್ಥಾನಂ ಅಧಿಕಾರಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಕೂಡಲೇ ಸುತ್ತಮುತ್ತ ಬೋನನ್ನು ಅಳವಡಿಸಿ ರಾತ್ರಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಲಿಪಿರಿ-ತಿರುಮಲ ಕಾಲುದಾರಿಯಲ್ಲಿ ಕಳೆದ ಐದು ದಿನಗಳ ಹಿಂದಷ್ಟೇ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿತ್ತು. ಬಾಲಾಜಿಯ ದರ್ಶನಕ್ಕಾಗಿ ತಿರುಪತಿಯಲ್ಲಿದ್ದ ಯಾತ್ರಾರ್ಥಿಗಳಲ್ಲಿ ಆತಂಕ ಮೂಡಿಸಿತ್ತು.

lokesh

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

2 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

2 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

2 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

3 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

5 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

5 hours ago