BREAKING NEWS

ತಿರುಪತಿಯಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ : ತಿರುಮಲ ತಿರುಪತಿ ಕಾಲುದಾರಿಯಲ್ಲಿ ಮತ್ತೊಂದು ಚಿರತೆಯನ್ನು ಸೆರೆಹಿಡಿಯಲಾಗಿದೆ, ನರಸಿಂಹಸ್ವಾಮಿ ದೇವಸ್ಥಾನದ ಬಳಿ 5ನೇ ಚಿರತೆ ಸೆರೆ ಹಿಡಿಯಲಾಗಿದೆ. 4 ದಿನದಿಂದ ಟ್ರ್ಯಾಪ್ ಕ್ಯಾಮರಾ ಮೂಲಕ ಚಿರತೆ ಚಲನವಲನ ಪತ್ತೆ ಮಾಡಲಾಗುತ್ತಿತ್ತು, ಸಿಬ್ಬಂದಿ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಬೋನ್ ಇಟ್ಟಿದ್ದರು, ಅರಣ್ಯ ಸಿಬ್ಬಂದಿ ಗಂಡು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಚಿರತೆ ಸಂಕುಲವನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಅಲಿಪಿರಿ ಪಾದಚಾರಿ ಮಾರ್ಗದ ಉದ್ದಕ್ಕೂ ಬೋನ್‌ಗಳನ್ನು ಬಳಸಲಾಗಿತ್ತು.

ನಾಲ್ಕು ದಿನಗಳ ಹಿಂದೆಯಷ್ಟೇ ಟ್ರ್ಯಾಪ್ ಕ್ಯಾಮೆರಾದಲ್ಲಿ ಚಿರತೆಯ ಇರುವಿಕೆಯನ್ನು ಪತ್ತೆಹಚ್ಚಲಾಗಿತ್ತು. ಇದಕ್ಕೆ ಸ್ಪಂದಿಸಿದ ತಿರುಮಲ ತಿರುಪತಿ ದೇವಸ್ಥಾನಂ ಅಧಿಕಾರಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಕೂಡಲೇ ಸುತ್ತಮುತ್ತ ಬೋನನ್ನು ಅಳವಡಿಸಿ ರಾತ್ರಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಲಿಪಿರಿ-ತಿರುಮಲ ಕಾಲುದಾರಿಯಲ್ಲಿ ಕಳೆದ ಐದು ದಿನಗಳ ಹಿಂದಷ್ಟೇ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿತ್ತು. ಬಾಲಾಜಿಯ ದರ್ಶನಕ್ಕಾಗಿ ತಿರುಪತಿಯಲ್ಲಿದ್ದ ಯಾತ್ರಾರ್ಥಿಗಳಲ್ಲಿ ಆತಂಕ ಮೂಡಿಸಿತ್ತು.

lokesh

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

5 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

8 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

11 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

15 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

15 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

15 hours ago