ಪ್ರಾತಿನಿಧಿಕ ಚಿತ್ರ
ತಿರುಪತಿ : ತಿರುಮಲ ತಿರುಪತಿ ಕಾಲುದಾರಿಯಲ್ಲಿ ಮತ್ತೊಂದು ಚಿರತೆಯನ್ನು ಸೆರೆಹಿಡಿಯಲಾಗಿದೆ, ನರಸಿಂಹಸ್ವಾಮಿ ದೇವಸ್ಥಾನದ ಬಳಿ 5ನೇ ಚಿರತೆ ಸೆರೆ ಹಿಡಿಯಲಾಗಿದೆ. 4 ದಿನದಿಂದ ಟ್ರ್ಯಾಪ್ ಕ್ಯಾಮರಾ ಮೂಲಕ ಚಿರತೆ ಚಲನವಲನ ಪತ್ತೆ ಮಾಡಲಾಗುತ್ತಿತ್ತು, ಸಿಬ್ಬಂದಿ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಬೋನ್ ಇಟ್ಟಿದ್ದರು, ಅರಣ್ಯ ಸಿಬ್ಬಂದಿ ಗಂಡು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಚಿರತೆ ಸಂಕುಲವನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಅಲಿಪಿರಿ ಪಾದಚಾರಿ ಮಾರ್ಗದ ಉದ್ದಕ್ಕೂ ಬೋನ್ಗಳನ್ನು ಬಳಸಲಾಗಿತ್ತು.
ನಾಲ್ಕು ದಿನಗಳ ಹಿಂದೆಯಷ್ಟೇ ಟ್ರ್ಯಾಪ್ ಕ್ಯಾಮೆರಾದಲ್ಲಿ ಚಿರತೆಯ ಇರುವಿಕೆಯನ್ನು ಪತ್ತೆಹಚ್ಚಲಾಗಿತ್ತು. ಇದಕ್ಕೆ ಸ್ಪಂದಿಸಿದ ತಿರುಮಲ ತಿರುಪತಿ ದೇವಸ್ಥಾನಂ ಅಧಿಕಾರಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಕೂಡಲೇ ಸುತ್ತಮುತ್ತ ಬೋನನ್ನು ಅಳವಡಿಸಿ ರಾತ್ರಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಲಿಪಿರಿ-ತಿರುಮಲ ಕಾಲುದಾರಿಯಲ್ಲಿ ಕಳೆದ ಐದು ದಿನಗಳ ಹಿಂದಷ್ಟೇ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿತ್ತು. ಬಾಲಾಜಿಯ ದರ್ಶನಕ್ಕಾಗಿ ತಿರುಪತಿಯಲ್ಲಿದ್ದ ಯಾತ್ರಾರ್ಥಿಗಳಲ್ಲಿ ಆತಂಕ ಮೂಡಿಸಿತ್ತು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…