BREAKING NEWS

ತಿರುಮಲಕ್ಕೆ ಹೋಗುವ ದಾರಿಯಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ : ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ತಿರುಮಲಕ್ಕೆ ಹೋಗುವ ದಾರಿಯಲ್ಲಿ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಈ ಹಿಂದೆ ಎರಡು ಚಿರತೆಗಳನ್ನು ಸೆರೆಹಿಡಿಯಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ ಮಕ್ಕಳ ಮೇಲೆ ಎರಡು ಚಿರತೆಗಳು ದಾಳಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಬಾಲಕನ ಮೇಲೆ ದಾಳಿ ನಡೆಸಿದ ಚಿರತೆಯನ್ನು ಈ ಹಿಂದೆ ಸೆರೆಹಿಡಿಯಲಾಗಿತ್ತು. ಇದೀಗ ಆದಾದ ಮೂರು ದಿನಗಳ ನಂತರ ಮೂರನೇ ಚಿರತೆಯನ್ನು ಸೆರೆಹಿಡಿಯಲಾಗಿದೆ.

ನಾವು ಮೂರನೇ ಚಿರತೆಯನ್ನು ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಸೆರೆಹಿಡಿದಿದ್ದೇವೆ. ಅದೇ ಸ್ಥಳದಲ್ಲಿ ಎರಡನೇ ಚಿರತೆಯನ್ನು ಸೆರೆಹಿಡಿಯಲಾಗಿತ್ತು. ಸುಮಾರು ಐದು ವರ್ಷದ ಗಂಡು ಚಿರತೆ ಇದಾಗಿದೆ ಎಂದು ತಿರುಪತಿ ವಿಭಾಗೀಯ ಅರಣ್ಯಾಧಿಕಾರಿ (ಡಿಎಫ್ಒ) ಎ ಶ್ರೀನಿವಾಸುಲು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಈಗ ಸೆರೆಹಿಡಿದಿರುವ ಚಿರತೆಯನ್ನು ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್‌ನಲ್ಲಿ (ತಿರುಪತಿ ಮೃಗಾಲಯ) 10 ದಿನಗಳವರೆಗೆ ಕ್ವಾರಂಟೈನ್‌ನಲ್ಲಿ ಇಡಲಾಗುವುದು ಮತ್ತು ಮಾನವ ಮಾಂಸವನ್ನು ಸೇವಿಸಿದೆಯೇ ಎಂದು ಪರಿಶೀಲಿಸಲು ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದರು.

ಈಮಧ್ಯೆ, ಎರಡನೇ ಚಿರತೆಯ ಡಿಎನ್‌ಎ ವಿಶ್ಲೇಷಣೆಯ ವರದಿಗಾಗಿ ಇಲಾಖೆ ಇನ್ನೂ ಕಾಯುತ್ತಿದೆ. ಎರಡೂ ಚಿರತೆಗಳ ಡಿಎನ್ಎ ವಿಶ್ಲೇಷಣೆಯ ವರದಿಯನ್ನು ಪರಿಶೀಲಿಸಿದರೆ ಇತ್ತೀಚೆಗೆ ಅಪ್ರಾಪ್ತ ಬಾಲಕಿ ಮೇಲೆ ಯಾವ ಚಿರತೆ ದಾಳಿ ಮಾಡಿದೆ ಎಂಬುದು ಖಚಿತವಾಗಲಿದೆ ಎಂದು ಅವರು ಹೇಳಿದರು.

ತಿರುಮಲಕ್ಕೆ ಹೋಗುವ ಕಾಲ್ನಡಿಗೆ ಮಾರ್ಗದಲ್ಲಿ ಚಿರತೆಗಳ ಚಲನವಲನದ ಇಲಾಖೆ ನಿಗಾವಹಿಸಲಾಗುವುದು ಎಂದು ಶ್ರೀನಿವಾಸಲು ಹೇಳಿದರು.

ಬಾಲಕನ ಮೇಲೆ ದಾಳಿ ನಡೆಸಿದ ನಂತರ ಸೆರೆ ಸಿಕ್ಕ ಮೊದಲ ಚಿರತೆಯನ್ನು ಸುಮಾರು 40 ಕಿಮೀ ದೂರದ ಬಾಕರಾಪೇಟದಲ್ಲಿ ಬಿಡಲಾಗಿದೆ.

lokesh

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

1 hour ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

3 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

4 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

9 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

9 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

10 hours ago