BREAKING NEWS

ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆ ಬಳಿಕ ಮತ್ತೊಂದು ಶಾಕ್‌ :‌ ಏಕಾಏಕಿ ವಾಟರ್‌ ಬಿಲ್‌ ಡಬಲ್

ಬೆಂಗಳೂರು : ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ಳುತ್ತಿದೆಯಾ ಸರ್ಕಾರ ಎಂದು ಜನಸಾಮಾನ್ಯರಲ್ಲಿ ಪ್ರಶ್ನೆ ಮೂಡುತ್ತಿದೆ. ಸರ್ಕಾರದ ಉಚಿತ ಭಾಗ್ಯಗಳ ನಡುವೆ ರಾಜ್ಯದ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.
ಜೂನ್‌ ತಿಂಗಳಲ್ಲಿ ಬಂದಿರುವ ವಾಟರ್ ಬಿಲ್ ಏಕಾಏಕಿ ಡಬಲ್‌ ಆಗಿದೆ. ಕೆಲ ಮನೆಗಳಿಗೆ ಬಂದಿರುವ ನೀರಿನ ಬಿಲ್‌ ಮೂರ‍್ನಾಲ್ಕು ಪಟ್ಟು ಹೆಚ್ಚಾಗಿದೆ. ಇದು ಬೇಕಂತಲೇ ಮಾಡಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರಿನ ಕೆಲವು ಮನೆಗಳಲ್ಲಿ ಏಕಾಏಕಿ ಮನೆಯ ನೀರಿನ ಬಳಕೆಯ ಬಿಲ್ ಡಬಲ್, ತ್ರಿಬಲ್ ಆಗಿದೆ. ಹೀಗೆ ಹಲವು ರೀತಿಯಲ್ಲಿ ಬೆಲೆ ಏರಿಕೆ ಬಾಣ ಜನರಿಗೆ ಚುಚ್ಚುತ್ತಿದೆ. ಸರ್ಕಾರ ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ತಿದೆಯಾ ಅನ್ನೋ ಆರೋಪ ಕೂಡಾ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಏಕಾಏಕಿ ನೀರಿನ ಶುಲ್ಕ ಹೆಚ್ಚಳ ಆಗಿದೆ. ಇದರಿಂದಾಗಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಕಳೆದ ತಿಂಗಳು 930 ರೂ. ಬಂದಿತ್ತು, ಈ ತಿಂಗಳು ಏಕಾಏಕಿ 3,000 ದಾಟಿದೆ. ವಯಾಲಿಕಾವಲ್ ಬಳಿ ಒಂದೇ ರಸ್ತೆಯ ಹತ್ತಾರು ಮನೆಗಳಲ್ಲಿ ನೀರಿನ ಬಿಲ್ ಡಬಲ್ ಆಗಿರೋದು ನೋಡಿ ಜನ ಶಾಕ್ ಆಗಿದ್ದಾರೆ. ಉಚಿತ ಭಾಗ್ಯ ಅಂತ ಈ ರೀತಿ ಮಾಡಿದ್ದಾರೆ ಎಂದು ಜಲಮಂಡಳಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲ್ಲಾ ಫ್ರೀ ಭಾಗ್ಯ ಒಕೆ ಅದ್ರೇ ಈ ರೀತಿ ಬೇರೆ ರೀತಿಯಲ್ಲಿ ಸರ್ಕಾರ ನಮಗೆ ಬರೆ ಹಾಕ್ತಿದೆ ಅಂತ ಜನ ಆಕ್ರೋಶಗೊಂಡಿದ್ದಾರೆ. ಇನ್ನೂ ಜಲಮಂಡಳಿ ಅಧಿಕಾರಿಗಳನ್ನ ಕೇಳಿದ್ರೇ ಹೀಗೆ ಆಗಲು ಸಾಧ್ಯವಿಲ್ಲ. ಹೆಚ್ಚಿಗೆ ಬಿಲ್‌ಗೆ ಲೀಕೇಜ್ ಕಾರಣ ಇರಬಹುದು. ಒಂದೇ ರಸ್ತೆಯಲ್ಲಿ ಹತ್ತಾರು ಮನೆಗಳಿಗೆ ಈ ರೀತಿ ಆಗಿದೆ ಅಂದ್ರೆ ಪರಿಶೀಲನೆ ಮಾಡುತೇವೆ ಎಂದು ಹೇಳಿದ್ದಾರೆ.

lokesh

Recent Posts

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

34 mins ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

44 mins ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

49 mins ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

1 hour ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

6 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

6 hours ago