ಬೆಂಗಳೂರು : ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ಳುತ್ತಿದೆಯಾ ಸರ್ಕಾರ ಎಂದು ಜನಸಾಮಾನ್ಯರಲ್ಲಿ ಪ್ರಶ್ನೆ ಮೂಡುತ್ತಿದೆ. ಸರ್ಕಾರದ ಉಚಿತ ಭಾಗ್ಯಗಳ ನಡುವೆ ರಾಜ್ಯದ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.
ಜೂನ್ ತಿಂಗಳಲ್ಲಿ ಬಂದಿರುವ ವಾಟರ್ ಬಿಲ್ ಏಕಾಏಕಿ ಡಬಲ್ ಆಗಿದೆ. ಕೆಲ ಮನೆಗಳಿಗೆ ಬಂದಿರುವ ನೀರಿನ ಬಿಲ್ ಮೂರ್ನಾಲ್ಕು ಪಟ್ಟು ಹೆಚ್ಚಾಗಿದೆ. ಇದು ಬೇಕಂತಲೇ ಮಾಡಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನ ಕೆಲವು ಮನೆಗಳಲ್ಲಿ ಏಕಾಏಕಿ ಮನೆಯ ನೀರಿನ ಬಳಕೆಯ ಬಿಲ್ ಡಬಲ್, ತ್ರಿಬಲ್ ಆಗಿದೆ. ಹೀಗೆ ಹಲವು ರೀತಿಯಲ್ಲಿ ಬೆಲೆ ಏರಿಕೆ ಬಾಣ ಜನರಿಗೆ ಚುಚ್ಚುತ್ತಿದೆ. ಸರ್ಕಾರ ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ತಿದೆಯಾ ಅನ್ನೋ ಆರೋಪ ಕೂಡಾ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಏಕಾಏಕಿ ನೀರಿನ ಶುಲ್ಕ ಹೆಚ್ಚಳ ಆಗಿದೆ. ಇದರಿಂದಾಗಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಕಳೆದ ತಿಂಗಳು 930 ರೂ. ಬಂದಿತ್ತು, ಈ ತಿಂಗಳು ಏಕಾಏಕಿ 3,000 ದಾಟಿದೆ. ವಯಾಲಿಕಾವಲ್ ಬಳಿ ಒಂದೇ ರಸ್ತೆಯ ಹತ್ತಾರು ಮನೆಗಳಲ್ಲಿ ನೀರಿನ ಬಿಲ್ ಡಬಲ್ ಆಗಿರೋದು ನೋಡಿ ಜನ ಶಾಕ್ ಆಗಿದ್ದಾರೆ. ಉಚಿತ ಭಾಗ್ಯ ಅಂತ ಈ ರೀತಿ ಮಾಡಿದ್ದಾರೆ ಎಂದು ಜಲಮಂಡಳಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲ್ಲಾ ಫ್ರೀ ಭಾಗ್ಯ ಒಕೆ ಅದ್ರೇ ಈ ರೀತಿ ಬೇರೆ ರೀತಿಯಲ್ಲಿ ಸರ್ಕಾರ ನಮಗೆ ಬರೆ ಹಾಕ್ತಿದೆ ಅಂತ ಜನ ಆಕ್ರೋಶಗೊಂಡಿದ್ದಾರೆ. ಇನ್ನೂ ಜಲಮಂಡಳಿ ಅಧಿಕಾರಿಗಳನ್ನ ಕೇಳಿದ್ರೇ ಹೀಗೆ ಆಗಲು ಸಾಧ್ಯವಿಲ್ಲ. ಹೆಚ್ಚಿಗೆ ಬಿಲ್ಗೆ ಲೀಕೇಜ್ ಕಾರಣ ಇರಬಹುದು. ಒಂದೇ ರಸ್ತೆಯಲ್ಲಿ ಹತ್ತಾರು ಮನೆಗಳಿಗೆ ಈ ರೀತಿ ಆಗಿದೆ ಅಂದ್ರೆ ಪರಿಶೀಲನೆ ಮಾಡುತೇವೆ ಎಂದು ಹೇಳಿದ್ದಾರೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…