BREAKING NEWS

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಭೀಕರ ಅಪಘಾತ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.

ಎಕ್ಸ್ ಪ್ರೆಸ್ ವೇ ಉದ್ಘಾಟನೆಯಾದ ನಂತರ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದೀಗ ಮತ್ತೊಂದು ಭೀಕರ ಅಪಘಾತ ನಡೆದಿದೆ. ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವ ಸವಾರರು ಸ್ಥಳದಲ್ಲೇ ದಾರುಣ ಅಂತ್ಯ ಕಂಡಿದ್ದಾರೆ.

ಈ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಮೇಲ್ಸೇತುವೆ ಮೇಲೆ ನಡೆದಿದೆ. ಮೃತರನ್ನು 25 ವರ್ಷದ ಮಣಿ ಮತ್ತು 21 ವರ್ಷದ ಯುವಕ ಜನಾರ್ಧನ ಪೂಜಾರಿ ಎಂದು ಗುರುತಿಸಲಾಗಿದೆ. ಇಬ್ಬರು ಕೋಲಾರ ಹಾಗೂ ಕೊಪ್ಪಳ ಮೂಲದವರು. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ವೀಕೆಂಡ್​ ರಜೆ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾವಿನ ಏಕ್ಸ್ ಪ್ರೆಸ್ ವೇ ಎಂಬ ಕುಖ್ಯಾತಿ : ಈ ಎಕ್ಸ್ ಪ್ರೆಸ್ ವೇಯಲ್ಲಿ ಜನವರಿಯಿಂದ ಇಲ್ಲಿಯವರೆಗೂ 110 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು, 50 ಜನ ಮೃತಪಟ್ಟಿದ್ದಾರೆ. 190 ಜನರಿಗೆ ಗಾಯಗಳಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 575 ಅಪಘಾತಗಳಾಗಿದ್ದು, 60 ಮಂದಿ ಜನ ಮೃತಪಟ್ಟಿದ್ದಾರೆ.

lokesh

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago